ನವದೆಹಲಿ: ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ಗೆ ‘ಐಸಿಸ್ ಕಾಶ್ಮೀರ’ ಉಗ್ರ ಸಂಘಟನೆಯಿಂದ ಜೀವ ಬೆದರಿಕೆ ಬಂದಿದೆ. ಈ ಬಗ್ಗೆ ಮಂಗಳವಾರ ರಾತ್ರಿ ಗಂಭೀರ್ ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿದ್ದು, ಅವರ ನಿವಾಸದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಪೂರ್ವ ದೆಹಲಿಯ ಲೋಕಸಭಾ ಸದಸ್ಯ ಗೌತಮ್ ಗಂಭೀರ್ಗೆ ಈಮೇಲ್ಗಳ ರೂಪದಲ್ಲಿ ಬೆದರಿಕೆಗಳು ಬಂದಿವೆ. ಈ ಬಗ್ಗೆ ನಿನ್ನೆ ರಾತ್ರಿ ದೂರು ಬಂದಿದ್ದು, ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ತನಿಖೆ ಆರಂಭಿಸಿದ್ದು ಗಂಭೀರ್ರ ದೆಹಲಿಯ ರಾಜೇಂದ್ರ ನಗರದ ನಿವಾಸಕ್ಕೆ ಸೂಕ್ತ ಭದ್ರತೆ ನೀಡಲಾಗಿದೆ ಎಂದು ಡಿಸಿಪಿ ಶ್ವೇತಾ ಚೌಹಾನ್ ತಿಳಿಸಿದ್ದಾರೆ. (ಏಜೆನ್ಸೀಸ್)