More

    ಬಿಜೆಪಿ ಸಂಸದನ ರಕ್ಷಣೆ ನಾಚಿಕೆಗೇಡು

    ಸಿಂಧನೂರು: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಸಂಸದ ಬ್ರಿಜ್ ಭೂಷಣ್ ಶರಣ್‌ಸಿಂಗ್‌ನನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದಿಂದ ನಗರದ ಗಾಂಧಿ ವೃತ್ತ ಮತ್ತು ತಹಸಿಲ್ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

    ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರು ದೌರ್ಜನ್ಯ ನಡೆಸಿರುವುದು ಖಂಡನೀಯ. ಭಾರತ ಕುಸ್ತಿ ಫೆಡರೇಷನ್ ಮುಖ್ಯಸ್ಥ ಹಾಗೂ ಇತರ ಸಿಬ್ಬಂದಿ, ಪ್ರಖ್ಯಾತ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವುದು ದೇಶವೇ ತಲೆತಗ್ಗಿಸುವಂತಹ ಘಟನೆಯಾಗಿದೆ. ಕೇಂದ್ರ ಸರ್ಕಾರ ಬಿಜೆಪಿ ಸಂಸದನನ್ನು ರಕ್ಷಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

    ಅಂತಾರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯಲ್ಲಿ ಪದಕ ಗೆದ್ದು ಬಂದಾಗ ಮಹಿಳಾ ಕ್ರೀಡಾಪಟುಗಳೊಂದಿಗೆ ಸೆಲ್ಫಿ ತೆಗೆಸಿಕೊಂಡು ಬೀಗಿದ್ದ ಪ್ರಧಾನಿ ನರೇಂದ್ರ ಮೋದಿ, ದೌರ್ಜನ್ಯಕ್ಕೊಳಗಾಗಿ ನ್ಯಾಯ ಕೇಳಲು ಹೋರಾಟಕ್ಕೆ ಮುಂದಾದ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರಿಗೆ ಕುಮ್ಮಕ್ಕು ನೀಡಿ ಹಾಡಹಗಲೇ ದಬ್ಬಾಳಿಕೆ ನಡೆಸುವುದು ಸರಿಯಲ್ಲ.

    ಆರೋಪಿ ಬ್ರಿಜ್ ಭೂಷಣ್ ಶರಣ್‌ಸಿಂಗ್‌ನನ್ನು ಬಿಜೆಪಿಯಿಂದ ವಜಾಗೊಳಿಸಬೇಕು. ಪೊಕ್ಸೋ ಪ್ರಕರಣ ದಾಖಲಾಗಿರುವುದರಿಂದ ಈ ಕೂಡಲೇ ಪೊಲೀಸರು ಬ್ರಿಜ್ ಭೂಷಣ್ ಸಿಂಗ್‌ನನ್ನು ಬಂಧಿಸಬೇಕು. ದೇಶಾದ್ಯಂತ ದಿನೇ ದಿನೆ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ತಡೆಗಟ್ಟಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts