More

    ಬಿಜೆಪಿ ಯುವ ಸಂಸದರಿಂದ ತೆಲುಗು ಸೂಪರ್​ಸ್ಟಾರ್​ ಪವನ್​ ಕಲ್ಯಾಣ್​ ಭೇಟಿ: ಇದರ ಹಿಂದಿನ ಉದ್ದೇಶವೇನಿರಬಹುದು?

    ಬೆಂಗಳೂರು: ಬಿಜೆಪಿಯ ಯುವ ಸಂಸದರಾದ ಪ್ರತಾಪ್​ ಸಿಂಹ ಮತ್ತು ತೇಜಸ್ವಿ ಸೂರ್ಯ ಟಾಲಿವುಡ್​ ನಟ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಪವನ್​ ಕಲ್ಯಾಣ್​ರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

    ಇದು ವೈಯಕ್ತಿಕ ಭೇಟಿಯೋ? ಅಥವಾ ರಾಜಕೀಯ ಭೇಟಿಯೋ ಎಂಬುದು ತಿಳಿದುಬಂದಿಲ್ಲ. ಅಲ್ಲದೆ, ಭೇಟಿ ಮಾಡಿದ ಸ್ಥಳದ ಬಗ್ಗೆಯು ಮಾಹಿತಿ ನೀಡಿಲ್ಲ. ಆದರೆ, ಭೇಟಿಯಾಗಿರುವುದನ್ನು ಮಾತ್ರ ಸಂಸದ ಪ್ರತಾಪ್​ ಸಿಂಹ ಟ್ವಿಟರ್​ನಲ್ಲಿ ಖಚಿತ ಪಡಿಸಿದ್ದಾರೆ.

    ಪವನ್​ ಕಲ್ಯಾಣ್​ ಜತೆಗಿನ ಫೋಟೋಗಳನ್ನು ಶೇರ್​ ಮಾಡಿಕೊಂಡು, ನನ್ನು ಕಾಲೇಜು ದಿನಗಳಲ್ಲಿ ಪವನ್​ ಕಲ್ಯಾಣ್​ ಅವರ ಸಿನಿಮಾಗಳನ್ನು ವೀಕ್ಷಿಸುತ್ತಿದ್ದೆ. ಅಲ್ಲದೆ, ಅವರನ್ನು ತುಂಬಾ ಇಷ್ಟಪಡುತ್ತಿದ್ದೆ. ಇಂದು ನನಗೆ ಮತ್ತು ತೇಜಸ್ವಿ ಸೂರ್ಯರಿಗೆ ಪವನ್​ ಕಲ್ಯಾಣ್​ರನ್ನು ಭೇಟಿ ಮಾಡಿ ಮಾತನಾಡುವ ಅವಕಾಶ ಲಭಿಸಿತು. ಧನ್ಯವಾದಗಳು ಪವನ್​ ಕಲ್ಯಾಣ್​ ಮತ್ತು ವಿಶ್ವ ಗಾರು ಎಂದು ಪ್ರತಾಪ್​ ಸಿಂಹ ಟ್ವೀಟ್​ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts