ಲಖನೌ: ಉತ್ತರ ಪ್ರದೇಶದ ಬಿಜೆಪಿ ಸಂಸದ ಕೌಶಲ್ ಕಿಶೋರ್ ಮಗ ಆಯುಷ್ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ರಾಜಧಾನಿ ಲಖನೌದಲ್ಲಿ ಮಂಗಳವಾರ ನಡೆದಿದೆ.
ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಆಯುಷ್ರತ್ತ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಆದರೆ ಆಯುಷ್, ಸಂಬಂಧಿಕರ ಸಹಾಯದಿಂದ ತನ್ನ ಮೇಲೆ ಹಲ್ಲೆ ನಡೆಸಿ, ಕತೆ ಕಟ್ಟಿದ್ದಾನೆಂದು ಪೊಲೀಸರು ಶಂಕಿಸಿದ್ದಾರೆ.
ಇದನ್ನೂ ಓದಿರಿ: ದೇಶದಲ್ಲಿ ಅತಿಯಾದ ಲಿಂಗ ತಾರತಮ್ಯ; ಏಷ್ಯಾ-ಪೆಸಿಫಿಕ್ ವಲಯದಲ್ಲಿ ಭಾರತದಲ್ಲೇ ಹೆಚ್ಚು ಪಕ್ಷಪಾತ
ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಆಯುಷ್ ಸದ್ಯ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಯುಷ್ಗೆ ನಡುವಿನ ಮೇಲೊಂದು ಮತ್ತು ಭುಜದ ಕೆಳಗೊಂಡು ಗಾಯಗಳಾಗಿತ್ತು.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬತ್ತೆಗೆ ಬಲೆ ಬೀಸಿದ್ದಾರೆ. ಪ್ರಕರಣದಲ್ಲಿ ಪರವಾನಗಿ ಪಡೆದು ಪಿಸ್ತೂಲ್ ಅನ್ನೇ ಬಳಸಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಸದ್ಯ ತನಿಖೆ ಪ್ರಗತಿಯಲ್ಲಿದೆ. (ಏಜೆನ್ಸೀಸ್)
ಒನ್ ಕಟ್ ಟು ಕಟ್ನಲ್ಲಿ ರೂಪಾ ರಾಯಪ್ಪ; ಪುನೀತ್ ನಿರ್ಮಾಣದ ಚಿತ್ರದಲ್ಲಿ ನೆಗೆಟಿವ್ ಶೇಡ್
ಬಾಹ್ಯಾಕಾಶದಲ್ಲಿ ಹೋಟೆಲ್; ಆರ್ಬಿಟಲ್ ಅಸೆಂಬ್ಲಿ ಕಾರ್ಪೋರೇಷನ್ ಸಿದ್ಧತೆ