More

    ಕೃಷಿ ಹಾಗೂ ಕೃಷಿ ಕ್ಷೇತ್ರಕ್ಕೆ 1.50ಲಕ್ಷ ಕೋಟಿ ಬಿಜೆಪಿ ಸರ್ಕಾರ ನೀಡಿದೆ – ಡಾ. ನವೀನ್

    ಪುತ್ತೂರು: ರಾಷ್ಟ್ರೀಯ ವಿಚಾರಧಾರೆಗಳಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಹಿಂದುಗಳ ವಿರೋಧವಾಗಿರುವ ಕಾಂಗ್ರೆಸ್ ಸರ್ಕಾರವನ್ನು ನಿರ್ಲಕ್ಷ್ಯಿಸುವ ಕಾರ್ಯ ಲೋಕಸಭಾ ಚುನಾವಣೆಯ ಸಂದರ್ಭ ಮಾಡಬೇಕಾಗಿದೆ. ಕೃಷಿ ಹಾಗೂ ಕೃಷಿ ಕ್ಷೇತ್ರಕ್ಕೆ ೧.೫೦ಲಕ್ಷ ಕೋಟಿ ಬಿಜೆಪಿ ಸರ್ಕಾರ ನೀಡಿದೆ. ಜನರಲ್ಲಿರುವ ಕಾಂಗ್ರೆಸ್ ವಿರೋಧಿ ಮನಸ್ಥಿತಿಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ೩೧೨ ತಾಲೂಕುಗಳಲ್ಲಿ ಹೋರಾಟ ನಡೆಸಲಾಗುತ್ತಿದೆ. ಬರವನ್ನು ನಿಭಾಯಿಸುವ ಸಾಮಾನ್ಯ ಜ್ಞಾನವೂ ಸರ್ಕಾರಕ್ಕೆ ಇಲ್ಲ ಎಂದು ರಾಜ್ಯ ರೈತ ಮೂರ್ಚಾ ಕಾರ್ಯದರ್ಶಿ ಡಾ. ನವೀನ್ ಹೇಳಿದರು.

    ಅವರು ಪುತ್ತೂರು ತಾಲೂಕು ಆಡಳಿತ ಸೌಧದ ಮುಂಭಾಗದ ಅಮರ ಜವಾನ್ ಚೌಕದಲ್ಲಿ ಬಿಜೆಪಿ ರೈತ ಮೂರ್ಚಾ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ, ಜನ ವಿರೋಧಿ ನೀತಿಯನ್ನು ಖಂಡಿಸಿ ನಡೆದ ಪ್ರತಿಭಟನಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದರು.

    ಮಾಜಿ ವಾಸಕ ಸಂಜೀವ ಮಠಂದೂರು ಮಾತನಾಡಿ ೧೯೦ ತಾಲೂಕಿನಲ್ಲಿ ಬರವಿದ್ದು, ಬರ ಪೀಡಿತ ಪ್ರದೇಶಗಳ ಅಧ್ಯಯನವನ್ನು ಮಾಡಬೇಕಾದ ಸಿದ್ದರಾಮಯ್ಯ ವಿಧಾನ ಸೌಧ ದಿಂದ ಹೊರ ಬರುತ್ತಿಲ್ಲ. ನಾಲ್ಕು ಕಾಲುಗಳು ಯಾವಾಗ ಅಲುಗಾಡುತ್ತದೋ ಎಂದು ತಿಳಿಯದೆ, ಮುಖ್ಯ ಮಂತ್ರಿಗಳು ಕುರ್ಚಿ ಬಿಟ್ಟು ಏಳುತ್ತಿಲ್ಲ. ದಿನಕ್ಕೆ ಇಬ್ಬರಂತೆ ೧೭೦ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಅಂದರೆ ಬರ, ಬಿಜೆಪಿ ಅಂದರೆ ಸಮೃದ್ಧಿ ಎಂಬುದು ದೃಢವಾಗಿದೆ. ವಿದ್ಯುತ್ ಖರೀದಿಯಿಂದ ಸರ್ಕಾರ ಬ್ರಷ್ಟಾಚಾರ ಪ್ರಾರಂಭವಾಗಿದೆ. ರೈತರ ಕೃಷಿ ಸಾಲಗಳ ಬಗ್ಗೆ ಮಾಡಿದ ಘೋಷಣೆ ಇನ್ನೂ ಜಾರಿಯಾಗಿಲ್ಲ. ಕರ್ನಾಟಕ ಜನರನ್ನು ಕತ್ತಲೆಯಲ್ಲಿ ಹಾಕಿದ ಕಾಂಗ್ರೆಸ್ ಗೆ ಜನ ಹಿಡಿ ಶಾಪ ಹಾಕುತ್ತಿದ್ದಾರೆ. ಹಳ್ಳಿಯಲ್ಲಿ ಹೋರಾಟವನ ಎಂದು ತಿಳಿಸಿದರು.

    ನೆಲ್ಲಿಕಟ್ಟೆ ಖಾಸಗೀ ಬಸ್ ನಿಲ್ದಾಣದಿಂದ ಪುತ್ತೂರು ಆಡಳಿತ ಸೌಧದವರೆಗೆ ರೈತರ ಮೆರವಣಿಗೆ ನಡೆಯಿತು. ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ನೀಡಲಾಯಿತು. ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ, ನಗರ ಮಂಡಲ ಅಧ್ಯಕ್ಷ ಜಗನ್ನಿವಾಸ ರಾವ್, ಚಣಿಲ ತಿಮ್ಮಪ್ಪ ಶೆಟ್ಟಿ, ಆರ್. ಸಿ. ನಾರಾಯಣ, ಮಹೇಶ್ ಮೇನಾಲ, ರಾಘವೇಂದ್ರ ಭಟ್ ಕೆದಿಲ ಮತ್ತಿತರರು ಉಪಸ್ಥಿತರಿದ್ದರು.

    ಉಷಾ ಮುಳಿಯ ಪ್ರಾರ್ಥಿಸಿದರು. ರೈತ ಮೂರ್ಚಾ ಅಧ್ಯಕ್ಷ ಸರೇಶ್ ಕಣ್ಣಾರಾಯ ಸ್ವಾಗತಿಸಿದರು. ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಪ್ರಸ್ತಾವನೆಗೈದರು. ರಾಜೇಶ್ ಬನ್ನೂರು ಕಾರ್ಯಕ್ರಮ ನಿರೂಪಿಸಿದರು.

    ರಾಜ್ಯೋತ್ಸವ ರಸಪ್ರಶ್ನೆ - 27

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts