More

    ಮೈತ್ರಿ ಅಭ್ಯರ್ಥಿ ಎಚ್ಡಿಕೆ ಗೆಲುವಿಗೆ ಶ್ರಮಿಸೋಣ: ಜಿಲ್ಲಾ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜಯರಾಂ ಮನವಿ

    ಮಂಡ್ಯ: ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಸಕ್ರೀಯವಾಗಿ ಚುನಾವಣೆಯಲ್ಲಿ ತೊಡಗಿಕೊಂಡು ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜಯರಾಂ ಮನವಿ ಮಾಡಿದರು.
    ನಗರದ ಜಿಲ್ಲಾ ಬಿಜೆಪಿ ಕಚೇರಿ ವಿಕಾಸ ಭವನದಲ್ಲಿ ಆಯೋಜಿಸಿದ್ದ ಮಂಡ್ಯ ಗ್ರಾಮಾಂತರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಆದೇಶ ಪತ್ರ ವಿತರಿಸಿ ಮಾತನಾಡಿದರು. ಪದವಿ ಯಾವಾಗಲೂ ಶಾಶ್ವತವಲ್ಲ. ಪಕ್ಷ ನಮ್ಮ ಕೆಲಸವನ್ನು ಗುರುತಿಸಿ ಸ್ಥಾನಮಾನ ನೀಡುತ್ತದೆ. ಸಕ್ರಿಯವಾಗಿ ಸಂಘಟನೆಯಲ್ಲಿ ಕಾರ್ಯಕರ್ತರನ್ನು ಕರೆತಂದು ಜನಸೇವೆ ಮಾಡಲು ಮುಂದಾಗಬೇಕು. ಏ.೪ರಂದು ಮೈತ್ರಿಯ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವರು, ಈ ಹಿನ್ನಲೆಯಲ್ಲಿ ಎಲ್ಲಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
    ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಭೀಮೇಶ್ ಸಾತನೂರು, ನಿಕಟ ಪೂರ್ವ ಅಧ್ಯಕ್ಷೆ ಸುಜಾತ ಕೃಷ್ಣ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಆರಾಧ್ಯ, ಮುಖಂಡರಾದ ದ್ಯಾಪಸಂದ್ರ ಶಿವಕುಮಾರ್, ದೇವರಾಜು ಕೆರಗೋಡು, ಹುಲಿವಾನ ಶಿವಣ್ಣ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts