More

    ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ: ಯುವ ಮುಖಂಡ ಇಂಡುವಾಳು ಸಚ್ಚಿದಾನಂದ ಹೇಳಿಕೆ

    ಮಂಡ್ಯ: ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯಿದೆ. ಅದರಂತೆಯೇ ಪಕ್ಷಕ್ಕೆ ಮತ ನೀಡಲು ಜನರು ಉತ್ಸುಕರಾಗಿದ್ದಾರೆ ಎಂದು ಯುವ ಮುಖಂಡ ಇಂಡುವಾಳು ಸಚ್ಚಿದಾನಂದ ಹೇಳಿದರು.
    ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಹಾಗೂ ತಾಲೂಕಿನ ಚೀರನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಇದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳು ನೆರವಾಗಲಿವೆ. ಇನ್ನು ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಬದಲಾವಣೆ ಖಂಡಿತ ಆಗಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಹಲವು ಮುಖಂಡರು ಬಿಜೆಪಿ ಸೇರುತ್ತಿರುವುದೇ ಸಾಕ್ಷಿಯಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
    ಪಕ್ಷ ಸೇರ್ಪಡೆ: ಇದೇ ಸಂದರ್ಭದಲ್ಲಿ ಹಳುವಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಬಳ್ಳಾರಿ ಕೃಷ್ಣ, ಚೀರನಹಳ್ಳಿ ವಿಎಸ್‌ಎಸ್‌ಎನ್‌ಬಿ ಮಾಜಿ ನಿರ್ದೇಶಕ ಚಿಕ್ಕತಿಮ್ಮಣ್ಣ, ಎಂಪಿಸಿಎಸ್ ಮಾಜಿ ನಿರ್ದೇಶಕ ಶಂಕರಪ್ಪ, ಮುಖಂಡರಾದ ಜೆ.ಸಿದ್ದಯ್ಯ, ನಾರಾಯಣಸ್ವಾಮಿ, ಮುತ್ತುರಾಜು, ಹೇಮಂತ್‌ಕುಮಾರ್, ಪುರುಷೋತ್ತಮ್, ತಿಬ್ಬಯ್ಯ, ಕುಳ್ಳಪ್ಪ, ಪುಟ್ಟಸ್ವಾಮಿ(ಸಂದಪ್ಪ), ಸಂಪತ್‌ಕುಮಾರ್, ಲಿಂಗರಾಜು, ರವಿ, ಅಭಿ, ಜವರಾಯಿ ಅವರು ಬಿಜೆಪಿ ಸೇರ್ಪಡೆಯಾದರು.
    ಸಭೆಯಲ್ಲಿ ಬಿಜೆಪಿ ಶ್ರೀರಂಗಪಟ್ಟಣ ಮಂಡಲ ಅಧ್ಯಕ್ಷ ಪೀಹಳ್ಳಿ ರಮೇಶ್, ಬೇಲೂರು ಗ್ರಾ.ಪಂ ಮಾಜಿ ಅಧ್ಯಕ್ಷ ಯತ್ತಗದಹಳ್ಳಿ ಸಂಜು, ಸೂನಗಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಕಬ್ಬನಹಳ್ಳಿ ರಾಮಚಂದ್ರು, ಸಂತೆಕಸಲಗೆರೆ ಗ್ರಾ.ಪಂ ಉಪಾಧ್ಯಕ್ಷ ಹನಿಯಂಬಾಡಿ ಜಗದೀಶ್, ಕಾರಸವಾಡಿ ನಂದೀಶ್, ಮಂಗಲ ರಮೇಶ್, ಹನಿಯಂಬಾಡಿ ತಮ್ಮಣ್ಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts