ನವದೆಹಲಿ: ಸ್ವಾತಂತ್ರ್ಚ ಹೋರಾಟಕ್ಕೆ ಸಂಬಂಧಿಸಿ ಸಂಸದ ಅನಂತ ಕುಮಾರ್ ಹೆಗಡೆ ನೀಡಿದ್ದ ಹೇಳಿಕೆ ವಿವಾದಕ್ಕೀಡಾದ ಬೆನ್ನಲ್ಲೆ, ಈ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.
ಮಹಾತ್ಮ ಗಾಂಧಿ ಅವರನ್ನು ಗುರಿಯಾಗಿಸಿ ಸಂಸದ ಅನಂತ ಕುಮಾರ್ ಹೆಗಡೆ ನೀಡಿದ್ದ ಹೇಳಿಕೆ ವಿಚಾರವಾಗಿ ವಿವರಣೆ ನೀಡುವಂತೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಪಿಟಿಐ ಈ ಬಗ್ಗೆ ಕಟೀಲು ಅವರಿಂದ ಪ್ರತಿಕ್ರಿಯೆ ಕೋರಿದ ವೇಳೆ ಈ ವಿಚಾರ ತಿಳಿಸಿದ್ದು, ಅವರ ಹೇಳಿಕೆ ತೀವ್ರವಾಗಿ ಟೀಕೆಗೊಳಗಾದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. (ಏಜೆನ್ಸೀಸ್)