ಬೆಂಗಳೂರು: ರಾಜ್ಯ ವಿಧಅನಸಭೆ ಚುನಾವಣೆಯ ರಂಗು ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಈ ಮಧ್ಯೆ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ.
ಇನ್ನು ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಬಜರಂಗದಳವನ್ನು ನಿಷೇಧಿಸುವ ಅಂಶ ಬಿಜೆಪಿ ನಾಯಕರ ಕಣ್ಣು ಕೆಂಪಾಗಿಸಿದ್ದು ರಾಜ್ಯದ್ಯಂತ ಹೊಸ ವಿವಾದದ ಅಲೆ ಎಬ್ಬಿಸಿದೆ.
ಕಾಂಗ್ರೆಸ್ ಮಾಡುತ್ತಿರುವ ಅವಮಾನ
ಕಾಂಗ್ರೆಸ್ ಸದಾ ಶ್ರೀ ರಾಮನ ವಿಷಯದಲ್ಲಿ ರಾಜಕಾರಣ ಮಾಡುತ್ತಾ ಬಂದಿತ್ತು. ಈಗ ಜೈ ಭಜರಂಗಬಲಿ ಎನ್ನುವ ಹನುಮಾನ್ ಸೇವಕರನ್ನು ಬಂಧಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಈ ಪುಣ್ಯಭೂಮಿಗೆ ಕಾಂಗ್ರೆಸ್ ಮಾಡುತ್ತಿರುವ ಅವಮಾನ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿ ಕಿಡಿಕಾರಿದೆ.
ಇದನ್ನೂ ಓದಿ: VIDEO| ಶಾಲೆಯ ಆವರಣದಲ್ಲಿ ಅವಿತು ಕುಳಿತಿತ್ತು ಕರಡಿ; ಮುಂದೇನಾಯ್ತು ಗೊತ್ತಾ?
PFIನ ಕೈಗೊಂಬೆ
PFIನ ಕೈಗೊಂಬೆಯಾಗಿರುವ ಕರ್ನಾಟಕ ಕಾಂಗ್ರೆಸ್ , ಬಜರಂಗಬಲಿ ಆಂಜನೇಯನ ಭಕ್ತರನ್ನು ನಿಷೇಧಿಸುತ್ತೇವೆ ಎನ್ನುವ ಮೂಲಕ, ತನ್ನ ಹಿಂದೂ ವಿರೋಧಿ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಚುನಾವಣೆಯಲ್ಲಿ ನಿಮಗೆ ಕನ್ನಡಿಗರು ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿ ಎಚ್ಚರಿಸಿದೆ.