More

    ಮೈಸೂರು ದಸರಾ ಅಂದರೆ ಕಾಂಗ್ರೆಸ್​ ಸರ್ಕಾರ ಮೂಗು ಮುರಿಯುವುದೇಕೆ: ಬಿಜೆಪಿ

    ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಈ ಬಾರಿಯ ನಾಡ ಹಬ್ಬ ದಸರಾವನ್ನು ಸರಳವಾಗಿ ಆಚರಿಸಲಾಗುವುದೆಂಬ ಸಚಿವ ಎಚ್.ಸಿ. ಮಹದೇವಪ್ಪ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಬಿಜೆಪಿ ಮೈಸೂರು ದಸರಾ ಅಂದರೆ ಈ ಸರ್ಕಾರ ಮೂಗು ಮುರಿಯುವುದೇಕೆ ಎಂದು ಕಾಂಗ್ರೆಸ್​ಅನ್ನು ಪ್ರಶ್ನಿಸಿದೆ. ಬಿಟ್ಟಿ ಶೋಕಿಗಳಿಗೆ ಕೋಟಿ ಕೋಟಿ ಖರ್ಚು ಮಾಡುವ ಸಿದ್ದರಾಮಯ್ಯನವರು ಸರ್ಕಾರ ದೀಗ ಮೈಸೂರು ದಸರಾ ಆಚರಣೆಯನ್ನು ಮಾತ್ರ ಸರಳವಾಗಿ ಆಚರಣೆ ಮಾಡಲು‌ ಮುಂದಾಗಿದೆ ಎಂದು ಕಿಡಿಕಾರಿದೆ.

    ಇದನ್ನೂ ಓದಿ: ಮಾಧ್ಯಮ ಚರ್ಚೆಯಲ್ಲಿ ಭಯೋತ್ಪಾದಕರು; ಸುದ್ದಿ ವಾಹಿನಿಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

    ರಾಜೀವ್ ಗಾಂಧಿ ಪ್ರತಿಮೆ ಮಾಡುವುದಕ್ಕೆ, I.N.D.I.A ಮೈತ್ರಿಕೂಟದ ಸಭೆ ಮಾಡುವುದಕ್ಕೆ, ಅಲ್ಪಸಂಖ್ಯಾತರು, ಮಿಷನರಿಗಳ ಉದ್ಧಾರಕ್ಕಾಗಿ ಕಾಂಗ್ರೆಸ್​ ಸರ್ಕಾರದ ಬಳಿ ಕೋಟಿ ಕೋಟಿ ಹಣವಿದೆ. ಆದರೆ ನಾಡ ಹಬ್ಬ ದಸರಾ ಆಚರಿಸಲು, ಕನ್ನಡ ವಿವಿಗಳಿಗೆ ಅನುದಾನ ಕೊಡಲು, ಹಂಪಿ ಉತ್ಸವ ಆಚರಿಸಲು ಮಾತ್ರ ಸರ್ಕಾರಕ್ಕೆ ಬರ, ಅನುದಾನದ ಕೊರತೆ ಅಡ್ಡ ಬರುತ್ತದೆ.

    ಈ ಹಿಂದೆಯೂ ಸಿದ್ದರಾಮಯ್ಯ ಅವರು ದಸರಾ ಆಚರಣೆಗೆ ಹಣವಿಲ್ಲವೆಂದು ಹೇಳಿ, ಅದ್ಧೂರಿಯಾಗಿ ರಾಜ್ಯದ ತುಂಬಾ ಟಿಪ್ಪು ಜಯಂತಿಯನ್ನು ಆಚರಿಸಿದ್ದರು. ಮೈಸೂರು ದಸರಾ ಅಂದರೆ ಈ ಸರ್ಕಾರ ಮೂಗು ಮುರಿಯುವುದೇಕೆ ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts