More

    ಕಾಂಗ್ರೆಸ್​ಗೆ ಗೆಲ್ಲುವ ಅಭ್ಯರ್ಥಿಗಳಲ್ಲ, ನಿಲ್ಲುವ ಅಭ್ಯರ್ಥಿಗಳೇ ಸಿಗುತ್ತಿಲ್ಲ: ಬಿಜೆಪಿ ವ್ಯಂಗ್ಯ

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್​ ನಿರಾಕರಿಸಿರುವ ಕಾರಣ ಕಾಂಗ್ರೆಸ್​ ಸೇರಿರುವ ಮಾಜಿ ಸಿಎಂ ಜಗದೀಶ್​​ ಶೆಟ್ಟರ್​, ಲಕ್ಷ್ಮಣ್​ ಸವದಿ ಹಾಗೂ ಡಿ.ಕೆ. ಶಿವಕುಮಾರ್​​ ವಿರುದ್ಧ ಸರಣಿ ಟ್ವೀಟ್​ ಮಾಡುವ ಮೂಲಕ ವಾಗ್ದಾಳಿ ನಡೆಸಿದೆ.

    ಗೆಲ್ಲುವ ಅಭ್ಯರ್ಥಿಗಳಲ್ಲ, ಕಾಂಗ್ರೆಸ್​ಗೆ ನಿಲ್ಲುವ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ಟ್ವೀಟ್​ ಮಾಡುವ ಮೂಲಕ ಟೀಕಿಸಿದೆ.

    ನಿಮ್ಮ ಹಳೇ ಬಂಡಿಗೆ ಎಷ್ಟೇ ಬಣ್ಣ ಬಳಿದರೂ ಹೊಸತಾಗುವುದಿಲ್ಲ

    ಈ ಕುರಿತು ಟ್ವೀಟ್​ ಮಾಡಿರುವ ಬಿಜೆಪಿ ಕಾಂಗ್ರೆಸ್​ಗೆ ಗೆಲ್ಲುವ ಅಭ್ಯರ್ಥಿಗಳಲ್ಲ ನಿಲ್ಲುವ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಹಾಗಾಗಿ ಅಭ್ಯರ್ಥಿಗಳನ್ನು ಆಮದು ಮಾಡುವ ಸ್ಥಿತಿಗೆ ತಲುಪಿದೆ.

    ಕಮಲವನ್ನೇ ಅರಳಿಸುತ್ತೇವೆಂದು ಜನ ತೀರ್ಮಾನ ಮಾಡಿರುವಾಗ, ನಿಮ್ಮ ಹಳೇ ಬಂಡಿಗೆ ಎಷ್ಟೇ ಬಣ್ಣ ಬಳಿದರೂ ಬಂಡಿ ಮಾತ್ರ ಹೊಸತಾಗುವುದಿಲ್ಲ ಎಂದು ವ್ಯಂಗ್ಯವಾಡಿದೆ.

    ಇದನ್ನೂ ಓದಿ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್​ ಶಾಕ್​: ಧಾರವಾಡಕ್ಕೆ ನೋ ಎಂಟ್ರಿ, ಅರ್ಜಿ ವಜಾ

    ಚುಕ್ಕಾಣಿ‌ ಹಿಡಿದವರಿಗೆ ದುಡ್ಡೇ ದೊಡ್ಡಪ್ಪ

    ಇನ್ನು ಇತ್ತೀಚಿಗೆ ಪ್ರಕಟವಾದ ಕೆಪಿಸಿಸಿ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ಟಿ.ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಕೃಷ್ಣಮೂರ್ತಿ ತಮ್ಮಗೆ ಟಿಕೆಟ್​ ಸಿಗದಿದ್ದಕ್ಕೆ ಡಿಕೆ ಸಹೋದರರ ವಿರುದ್ಧ ಆರೋಪವನ್ನು ಮಾಡಿದ್ಧಾರೆ.

    ರಾಜ್ಯ ಕಾಂಗ್ರೆಸ್​ ಚುಕ್ಕಾಣಿ ಹಿಡಿದವರಿಗೆ ಚುಕ್ಕಾಣಿ‌ ಹಿಡಿದವರಿಗೆ ದುಡ್ಡೇ ದೊಡ್ಡಪ್ಪ. ಹಣಕ್ಕಾಗಿ ಯಾವ‌ ಮಟ್ಟಕ್ಕೂ ಇಳಿಯಲು‌ ತಯಾರಿರುವ ಡಿ.ಕೆ. ಶಿವಕುಮಾರ್​ ಹಣಕ್ಕಾಗಿ‌ ಟಿಕೆಟ್ ಮಾರಿಕೊಂಡು ಸ್ವಂತ ಸಮುದಾಯದವರಿಗೇ ಅನ್ಯಾಯ ಮಾಡಿದ್ದಾರೆಂಬ ಕೂಗು ದಾಸರಹಳ್ಳಿ ಕ್ಷೇತ್ರದಿಂದ ಕೇಳಿಬಂದಿದೆ. ಇನ್ನುಳಿದ ಕ್ಷೇತ್ರಗಳ ಕಥೆಯೂ ಇದೇ ಎಂದು ಟ್ವೀಟ್​ ಮಾಡಿ ಕಿಡಿಕಾರಿದೆ.

    BJP Tweet

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts