More

    ಹಿಮಾಚಲ ಪ್ರದೇಶ: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಕಾಂಗ್ರೆಸ್​ ಅಭಿಷೇಕ್ ಮನು ಸಿಂಘ್ವಿಗೆ ಸೋಲು!

    ನವದೆಹಲಿ: 68 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಕೇವಲ 25 ಶಾಸಕರನ್ನು ಹೊಂದಿದ್ದರೂ ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗೆ ಜಯ ತಂದುಕೊಡುವಲ್ಲಿ ಯಶಸ್ವಿಯಾಗಿದೆ. ಅಡ್ಡಮತದಾನದ ಪರಿಣಾಮ ಅಭಿಷೇಕ್ ಮನು ಸಿಂಘ್ವಿ ಸೋಲು ಕಂಡಿದ್ದಾರೆ. ಸಿಂಘ್ವಿ ವಿರುದ್ಧ ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ಗೆದ್ದಿದ್ದಾರೆ.

    ಇದನ್ನೂ ಓದಿ: ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ: ಪತ್ರಕರ್ತರ ಪ್ರಶ್ನೆಗೆ ‘ನಡಿಯೋ ಆಚೆ’ ಎಂದ ಸಂಸದ ನಾಸಿರ್‌ ಹುಸೇನ್‌!

    ಇಬ್ಬರೂ ಅಭ್ಯರ್ಥಿಗಳ ಪರವಾಗಿ ತಲಾ 34 ಮತಗಳು ಚಲಾವಣೆಯಾಗಿತ್ತು. ಅಂತಿಮವಾಗಿ ಚೀಟಿ ಎತ್ತುವ ಮೂಲಕ ರಾಜ್ಯಸಭೆಗೆ ಆಯ್ಕೆ ಮಾಡಲಾಯಿತು.68 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 40 ಶಾಸಕರನ್ನು ಹೊಂದಿರುವ ಮತ್ತು ಸ್ವತಂತ್ರರ ಬೆಂಬಲವನ್ನು ಪಡೆದಿರುವ ಕಾಂಗ್ರೆಸ್‌ಗೆ ಇದು ದೊಡ್ಡ ಆಘಾತವಾಗಿದೆ.

    ಕಾಂಗ್ರೆಸ್ ಶಾಸಕರು ‘ಆತ್ಮಸಾಕ್ಷಿಯ ಮತ’ ಚಲಾಯಿಸುತ್ತಾರೆ ಎಂಬ ವಿಶ್ವಾಸದಲ್ಲಿದ್ದ ಬಿಜೆಪಿ ಪರವಾಗಿ ಒಂಬತ್ತು ಶಾಸಕರು ಮತ ಚಲಾಯಿಸಿದ್ದಾರೆ ಎಂದು ಫಲಿತಾಂಶ ಸ್ಪಷ್ಟಪಡಿಸಿದೆ. ಪ್ರಸ್ತುತ ಹಿಮಾಚಲಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ 25 ಶಾಸಕರನ್ನು ಹೊಂದಿದೆ.

    ಹರ್ಷ್ ಮಹಾಜನ್ ಅವರಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಅವರು ಗೆದ್ದಿದ್ದಾರೆ. ಅವರು ನನ್ನ ಅಭಿನಂದನೆಗೆ ಅರ್ಹರು. ಆತ್ಮಾವಲೋಕನ ಮಾಡಿ ಮತ್ತು ಯೋಚಿಸಿ ಎಂದು ನಾನು ಅವರ ಪಕ್ಷಕ್ಕೆ ಹೇಳಲು ಬಯಸುತ್ತೇನೆ. 25 ಸದಸ್ಯರ ಪಕ್ಷವು 43 ಸದಸ್ಯರ ವಿರುದ್ಧ ಅಭ್ಯರ್ಥಿಯನ್ನು ನಿಲ್ಲಿಸಿದಾಗ ಅದರಲ್ಲಿರುವುದು ಒಂದೇ ಸಂದೇಶ. ಅದೇನೆಂದರೆ ಕಾನೂನಿನಿಂದ ಅನುಮತಿಸದ ಕೆಲಸವನ್ನು ನಾವು ನಿರ್ಲಜ್ಜವಾಗಿ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.

    ಕಾಂಗ್ರೆಸ್​ ಕಾರ್ಯಕರ್ತರಿಂದ ಪಾಕಿಸ್ತಾನ್​ ಜಿಂದಾಬಾದ್​ ಎಂದು ದೇಶದ್ರೋಹಿ ಹೇಳಿಕೆ: ಆರ್.ಅಶೋಕ್​ ಆಕ್ರೋಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts