More

    ಧ್ವಜಾರೋಹಣದ ವಿಚಾರಕ್ಕೆ ಗಲಾಟೆ; ಬಿಜೆಪಿ ಕಾರ್ಯಕರ್ತನ ಹತ್ಯೆ

    ಹೂಗ್ಲಿ: ಪಶ್ಚಿಮಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್​ ಬೆಂಬಲಿಗರ ಗೂಂಡಾಗಿರಿ ಹೊಸದಲ್ಲ. ಅಲ್ಲಿ ರಾಜಕೀಯ ಪಕ್ಷಗಳ ನಡುವೆ ಹೊಡೆದಾಟ, ಕೊಲೆ ತೀರ ಸಾಮಾನ್ಯವೆಂಬಂತೆ ಆಗಿಬಿಟ್ಟಿದೆ. ಅದರಲ್ಲೂ ಬಿಜೆಪಿ ಮುಖಂಡರನ್ನೇ ಗುರಿಯಾಗಿಸಿ ಹಲ್ಲೆ ಮಾಡುವುದು, ಅವರನ್ನು ಹತ್ಯೆ ಮಾಡುವುದು ನಡೆಯುತ್ತಲೇ ಇರುತ್ತದೆ.

    ಇದೀಗ ಹೂಗ್ಲಿ ಜಿಲ್ಲಾ ಪರಿಷತ್​​ನ ಬಿಜೆಪಿ ಸದಸ್ಯನೋರ್ವನ ಹತ್ಯೆ ಆಗಿದೆ. ಸ್ವಾತಂತ್ರ್ಯ ದಿನಾಚರಣೆ ವೇಳೆ ಧ್ವಜಾರೋಹಣ ಮಾಡುವ ವಿಚಾರಕ್ಕೆ ತೃಣಮೂಲ ಕಾಂಗ್ರೆಸ್​ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಗಿ, ಅದರಲ್ಲಿ ಬಿಜೆಪಿಯ ಕಾರ್ಯಕರ್ತನೋರ್ವ ಮೃತಪಟ್ಟಿದ್ದಾನೆ. ಇದನ್ನೂ ಓದಿ: 74ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಭಾರತದ ಕ್ರೀಡಾಪಟುಗಳು…

    ಹರೀಶ್​ಚಕ್​ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ಕಾರ್ಯಕರ್ತನ ಹೆಸರು ಸುಧಾಮ್​ ಪ್ರಾಮಾಣಿಕ್​ ಎಂದು ಹೇಳಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಈತನ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.

    ಸುಧಾಮ್​​ ಅವರನ್ನು ಹತ್ಯೆ ಮಾಡಿದ್ದು ತೃಣಮೂಲ ಕಾಂಗ್ರೆಸ್​ನ ಗೂಂಡಾಗಳು ಎಂದು ಬಿಜೆಪಿ ಬೆಂಬಲಿಗರು ಆರೋಪ ಮಾಡಿದ್ದಾರೆ. ಆದರೆ ಸ್ಥಳೀಯ ತೃಣಮೂಲ ಕಾಂಗ್ರೆಸ್​ ಮುಖಂಡರು ಈ ಆರೋಪವನ್ನು ಅಲ್ಲಗಳೆದಿದ್ದಾರೆ. ಬಿಜೆಪಿಯಲ್ಲೇ ಒಳಜಗಳ ನಡೆದು, ಅವರವರೇ ಹೊಡೆದಾಡಿಕೊಂಡಿದ್ದಾರೆ. ಆಗಲೇ ಸುಧಾಮ್ ಜೀವ ಹೋಗಿದೆ ಎಂದಿದ್ದಾರೆ.

    ಸ್ಥಳೀಯ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. (ಏಜೆನ್ಸೀಸ್​)

    ‘ಡಿಜೆ ಹಳ್ಳಿ ಗಲಭೆಕೋರರಿಗೆ ಶಿಕ್ಷೆ ಕೊಡಿಸುವುದನ್ನು ಬಿಟ್ಟು ನಮ್ಮ ಮೇಲ್ಯಾಕೆ ಆರೋಪ ಮಾಡುತ್ತೀರಿ?’-ಕಾಂಗ್ರೆಸ್​ ಕಿಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts