ಚೆನ್ನೈ: ಬೈಕ್ನಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಅಪ್ರಾಪ್ತ ವಯಸ್ಕ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಘಟನೆಯೂ ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ವಿಲ್ಲಿವಕ್ಕಂನಲ್ಲಿ ನಡೆದಿದ್ದು ಪ್ರಕರಣ ಸಂಬಂಧ ಬಿಜೆಪಿ ಮುಖಂಡ ಬಾಲಚಂದ್ರನ್(47)ನನ್ನು ಬಾಲಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಹಿನ್ನಲೆ?
ಅಪ್ರಾಪ್ತ ವಯಸ್ಕ ಬಾಲಕನಿಗೆ ಬಂಧಿತ ಆರೋಪಿ ಬಾಲಚಂದ್ರನ್ ಲಿಫ್ಟ್ ಕೊಡುವ ನೆಪದಲ್ಲಿ ಮೊದಲಿಗೆ ಬೈಕ್ ಹತ್ತುವಂತೆ ಹೇಳಿದ್ದಾನೆ. ಬಳಿಕ ಆತನನ್ನು ಪಾಡಿ ಎಂಬ ಪ್ರದೇಶದಲ್ಲಿರುವ ಸೇತುವೆ ಬಳಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ಧಾನೆ.
ಇದನ್ನೂ ಓದಿ: ಯಾರನ್ನು ತೃಪ್ತಿಪಡಿಸಲು ಸಚಿವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ?: ಆರಗ ಜ್ಞಾನೇಂದ್ರ
ಇದಾದ ಕೆಲ ಹೊತ್ತಿನ ಬಳಿಕ ಬಾಲಕ ಹೇಳಿದ ಜಾಗಕ್ಕೆ ಆರೋಪಿ ಲಿಫ್ಟ್ ನೀಡಿದ್ದಾನೆ. ಈ ವೇಳೆ ಅಪ್ರಾಪ್ತ ವಯಸ್ಕ ಜೋರಾಗಿ ಅಳುತ್ತಿದ್ದನ್ನು ಗಮನಿಸಿದ ಸ್ಥಳೀಯರು ಏನಾಯಿತು ಎಂದು ವಿಚಾರಿಸಿದಾಗ ನಡೆದ ಘಟನೆಯನ್ನು ಸಂತ್ರಸ್ತ ಬಾಲಕ ಹೇಳಿಕೊಂಡಿದ್ದಾನೆ.
ಈ ವೇಳೆ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಹಿಡಿದ ಸಾರ್ವಜನಿಕರು ಗಾಡಿಯನ್ನು ಪರಿಶೀಲಿಸಿದಾಗ ಬಿಜೆಪಿ ಪಕ್ಷದ ಶಾಲು ಹಾಗೂ ಐಡಿ ಕಾರ್ಡ್ ದೊರೆತಿದೆ. ಬಳಿಕ ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಬಾಲಚಂದ್ರನ್ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.