More

    ದೇಶವನ್ನು ಕಾಂಗ್ರೆಸ್‌ನವರಷ್ಟು ಯಾರೂ ಒಡೆದಿಲ್ಲ

    ದಾವಣಗೆರೆ : ದೇಶವನ್ನು ಕಾಂಗ್ರೆಸ್‌ನವರಷ್ಟು ಯಾರೂ ಒಡೆದಿಲ್ಲ, ಇದರ ಕೀರ್ತಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ಸಲ್ಲುತ್ತದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.
    ನಗರದ ಜಿ.ಎಂ.ಐ.ಟಿ ಕಾಲೇಜಿನಲ್ಲಿ ಶನಿವಾರ, ಪಕ್ಷದ ರಾಜ್ಯ ರೈತ ಮೋರ್ಚಾ ವಿಶೇಷ ಸಭೆ ಉದ್ಘಾಟಿಸಿ ಮಾತನಾಡಿದರು.
    ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸಿದೆ, ಅದರೆ ಅದು ದೇಶದ ಎಲ್ಲ ಭಾಗಗಳನ್ನು ತಲುಪಲು ಆಗಿಲ್ಲ. ಆ ಪಕ್ಷಕ್ಕೆ ಇಲ್ಲಿಯವರೆಗೂ ಅಧ್ಯಕ್ಷರೇ ಇರಲಿಲ್ಲ, ಈಗ ಚುನಾವಣೆ ನಡೆಸುತ್ತಿದ್ದಾರೆ. ನಮಗೆ ಒಬ್ಬ ಮಹಾನ್ ನಾಯಕ ನರೇಂದ್ರ ಮೋದಿ ಇದ್ದಾರೆ ಎಂದರು.
    370 ನೇ ವಿಧಿಯನ್ನು ರದ್ದು ಮಾಡುವ ಮೂಲಕ ಭಾರತ್ ಜೋಡೋ ಕಾರ್ಯಕ್ರಮವನ್ನು ನಾವು ಮಾಡಿದ್ದೇವೆ. ಮೋದಿ ಪ್ರಧಾನ ಮಂತ್ರಿ ಆದ ಮೇಲೆ ದೇಶ ಸುಭಿಕ್ಷವಾಗಿದೆ, ಬದಲಾಗುತ್ತಿದೆ ಎಂದು ಹೇಳಿದರು.
    ಕಾಂಗ್ರೆಸ್‌ನವರು ‘ಪೇ ಸಿಎಂ’ ಎನ್ನುವ ವಿಷಯ ಇಟ್ಟುಕೊಂಡು ಮುಖ್ಯಮಂತ್ರಿ ಅವರನ್ನು ಅಪಮಾನ ಮಾಡುತ್ತಿದ್ದಾರೆ. ಆದರೆ ಆ ಪಕ್ಷದಲ್ಲೇ ಎಲ್ಲವೂ ಸರಿಯಾಗಿಲ್ಲ ಎಂದು ಹೇಳಿದರು.
    ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಡಾ. ಜಿ. ಪರಮೇಶ್ವರ್ ಅವರು ಸಿಎಂ ಕುರ್ಚಿಯ ಕನಸು ಕಾಣುತ್ತಿದ್ದು ಅವರೊಳಗೇ ಗೊಂದಲವಿದೆ. ಉತ್ತರ ಕರ್ನಾಟಕದಲ್ಲಿ ವಿಳಾಸವೇ ಇಲ್ಲದ ಜೆಡಿಎಸ್‌ನವರೂ ಮುಖ್ಯಮಂತ್ರಿ ಆಗುವುದಾಗಿ ಹೇಳಿಕೊಳ್ಳುತ್ತಿದ್ದಾರೆ ಎಂದು ಕಾಲೆಳೆದರು.
    ಬಿಜೆಪಿ ಕಾರ್ಯಕರ್ತರು, ಮುಖಂಡರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಿದ್ದಾರೆ. ಕೋವಿಡ್ ಭೀತಿಯ ಸಂದರ್ಭದಲ್ಲಿ ಸಮಾಜಕ್ಕೆ ನೆರವಾಗಿದ್ದಾರೆ. ಇನ್ನುಮುಂದೆ ರಾಜಕೀಯವಾಗಿ ಸವಾಲಿನ ದಿನಗಳು ಬರಲಿವೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts