ಕಾಂಗ್ರೆಸ್ನಿಂದ ಬಿಜೆಪಿಗೆ ಬಂದಿರುವ ಜ್ಯೋತಿರಾದಿತ್ಯ ಸಿಂಧಿಯಾ ಎಡವಟ್ಟು ಮಾಡಿದ್ದಾರೆ. ಮಧ್ಯಪ್ರದೇಶ ಉಪಚುನಾವಣೆಯ ಪ್ರಚಾರದ ವೇಳೆ ಕಾಂಗ್ರೆಸ್ಗೆ ಮತ ಹಾಕಿ ಎಂದು ಹೇಳುವ ಮೂಲಕ ಟ್ರೋಲ್ಗೆ ಒಳಗಾಗಿದ್ದಾರೆ.
ಡಬ್ರಾದಲ್ಲಿ ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿ ಪರ ಮತ ಯಾಚನೆ ಮಾಡಿದ ಸಿಂಧಿಯಾ, ಉತ್ಸಾಹದಿಂದ ಭಾಷಣವನ್ನು ಮಾಡುತ್ತಾರೆ. ಆದರೆ ಕೊನೆಯಲ್ಲಿ ಬಾಯ್ತಪ್ಪಿ ಕೈ ಗುರುತಿಗೆ ಮತ ಹಾಕಿ ಎನ್ನುತ್ತಾರೆ. ಆ ವಿಡಿಯೋ ಇದೀಗ ಎಲ್ಲಕಡೆ ವೈರಲ್ ಆಗಿದೆ. ಇದನ್ನೂ ಓದಿ: ಪಂಜರ ಮುರಿದು ಸಫಾರಿ ಪಾರ್ಕ್ನಿಂದ ಹುಲಿ ಎಸ್ಕೇಪ್: ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!
ಅಷ್ಟೇ ಅಲ್ಲ, ಮಧ್ಯಪ್ರದೇಶ ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋ ಶೇರ್ ಮಾಡಿಕೊಂಡು, ಖಂಡಿತ ನವೆಂಬರ್ 3ರಂದು ಕಾಂಗ್ರೆಸ್ಗೆ ಮತ ಹಾಕುವುದಾಗಿ ಮಧ್ಯಪ್ರದೇಶದ ಜನರು ನಿಮಗೆ ಭರವಸೆ ಕೊಡುತ್ತಾರೆ ಎಂದು ಕಾಲೆಳೆದಿದೆ. ಆದರೆ ನಂತರ ಸಿಂಧಿಯಾ ತಮ್ಮ ತಪ್ಪನ್ನು ಸರಿಪಡಿಸಿಕೊಂಡಿದ್ದಾರೆ. ಕೈ ಗುರುತನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ಕಮಲಕ್ಕೆ ಮತ ಹಾಕಿ ಎಂದು ಹೇಳಿದ್ದಾರೆ.
ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ಉಪಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳ ಪ್ರಚಾರವೂ ಭರ್ಜರಿಯಾಗಿ ಸಾಗುತ್ತಿದೆ.
सिंधिया जी,
मध्यप्रदेश की जनता विश्वास दिलाती है कि तीन तारीख़ को हाथ के पंजे वाला बटन ही दबेगा। pic.twitter.com/dGJWGxdXad— MP Congress (@INCMP) October 31, 2020