More

    ಬಿಜೆಪಿ ಗೆಲುವು ನಿಶ್ಚಿತ: ಬೆಲ್ಲದ

    ವಿಜಯವಾಣಿ ಸುದ್ದಿಜಾಲ ಧಾರವಾಡ
    ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು, ಈ ಬಾರಿ ಸಹ ಧಾರವಾಡದ ಜನರು ಬಿಜೆಪಿ ಅಭ್ಯಥಿರ್ ಪ್ರಲ್ಹಾದ ಜೋಶಿ ಅವರಿಗೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ವಿಶ್ವಾಸ ವ್ಯಕ್ತಪಡಿಸಿದರು.
    ನಗರದಲ್ಲಿ ಮಂಗಳವಾರ ಮತದಾನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 28 ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ಭರವಸೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್​ನ ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಉತ್ತಮ ಆಡಳಿತ ನೀಡಿರುವ ಕಾರಣ ಜನರ ಸ್ಪಂದನೆ ಉತ್ತಮವಾಗಿದೆ. ಹೀಗಾಗಿ ಈ ಬಾರಿ ಸಹ ಬಿಜೆಪಿ ಅಭ್ಯಥಿರ್ಗಳು ಗೆಲುವು ನಿಶ್ಚಿತ ಎಂದರು.
    ಕ್ಷೇತ್ರದಲ್ಲಿ ಜೋಶಿ ಅವರಿಗೆ ಲಿಂಗಾಯತ ವಿರೋಧಿ ಅಲೆ ಎದುರಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕ್ಷೇತ್ರದಲ್ಲಿ ಜೋಶಿ ಅವರಿಗೆ ಯಾವುದೇ ವಿರೋಧ ಇಲ್ಲ. ಲಿಂಗಾಯತ ಸೇರಿ ಎಲ್ಲ ಸಮುದಾಯದ ಜನರು ಜೋಶಿ ಅವರೊಂದಿಗೆ ಇದ್ದಾರೆ. ಲಿಂಗಾಯತ ವಿರೋಧಿ ಎನ್ನುವುದು ಊಹಾಪೋಹ ಅಷ್ಟೇ. ಕೀರ ದಿಂಗಾಲೇಶ್ವರ ಶ್ರೀಗಳ ಮಾತಿಗೆ ಭಕ್ತರು ಹೆಚ್ಚಿನ ಮಹತ್ವ ನೀಡಿಲ್ಲ. ಅವರು ಕಾಂಗ್ರೆಸ್​ ಬೆಂಬಲಿತರು ಎನ್ನುವುದು ಮೊದಲಿನಿಂದಲೂ ಸಾಬೀತಾಗಿದೆ. ಹೀಗಾಗಿ ಶ್ರೀಗಳ ಹೇಳಿಕೆಗಳಿಗೆ ಜನರಿಂದ ಯಾವುದೇ ಮನ್ನಣೆ ಸಿಗಲಾರದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts