More

    ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಬಿಕೆ ಹರಿಪ್ರಸಾದ್

    ಬೆಂಗಳೂರು: ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ಭಾರಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್, ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

    ನಗರದ ಖಾಸಗಿ ಹೋಟೆಲ್​​​​​ನಲ್ಲಿ ನಡೆದ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಮಾತನಾಡಿರುವ ಹರಿಪ್ರಸಾದ್, ನನಗೆ ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಬಹಳ ಚೆನ್ನಾಗಿ ಗೊತ್ತಿದೆ ಎಂದರು.

    ನಾನೇ ಅವರಿಗೆ ಸಹಾಯ ಮಾಡುತ್ತೇನೆ
    ಉಡುಪಿ ಜಿಲ್ಲೆಯ ಕಾರ್ಕಳ ಕೋಟಿ ಚನ್ನಯ್ಯ ಪಾರ್ಕ್ ಗೆ 5 ಕೋಟಿ ಕೊಡಿ ಎಂದು ಕೇಳಿದ್ದೆವು. ಸಿದ್ದರಾಮಯ್ಯ ಕೊಡುತ್ತೇವೆ ಎಂದು ಕೊಟ್ಟಿಲ್ಲ. ನನಗೆ ಅವರು ರಾಜಕೀಯವಾಗಿ ಏನು ಸಹಾಯ ಮಾಡಲು ಆಗಲ್ಲ. ನಾನೇ ಅವರಿಗೆ ಸಹಾಯ ಮಾಡುತ್ತೇನೆ. ಮಂಗಳೂರು ವಿವಿಯಲ್ಲಿ ಗುರುಪೀಠ ಸ್ಥಾಪನೆಗೆ ನಾನು ಎಂಪಿ ಆದಾಗ ಹಣ ಕೊಟ್ಟಿದ್ದೆ. ಕಟ್ಟಡ ಅರ್ಧಕ್ಕೆ ನಿಂತಿದೆ ಹಣ ಕೊಟ್ಟಿಲ್ಲ, ಆದರೆ ಅವರ ಸಮಾಜಕ್ಕೆ ಎಷ್ಟು ಕೊಟ್ಟಿದ್ದಾರೆ ಎಂದು ಸ್ವಾಮೀಜಿಗಳು ನೋಡಲಿ ಎಂದು ಹರಿಪ್ರಸಾದ್ ತಿಳಿಸಿದರು.

    ಟಿಕೆಟ್​​ನಿಂದ ವಂಚಿತರಾದ ನಾಲ್ಕು ಜನ
    ಹಿಂದುಳಿದ ವರ್ಗ ಎಂದರೆ ಒಂದು ಜಾತಿ‌ ಮಾತ್ರವಲ್ಲ ಎಂದ ಹರಿಪ್ರಸಾದ್, ಜಾತಿ ಬೇರೆ, ವರ್ಗ ಬೇರೆ. ನಾವು ವರ್ಗದಲ್ಲಿ ಬರುತ್ತೇವೆ. ವರ್ಗದಲ್ಲಿ ಬರುವ ಎಲ್ಲರೂ ಸಮಾನ ಹಕ್ಕು ಪಡೆಯಬೇಕು. 11 ಕ್ಷೇತ್ರಗಳಲ್ಲಿ ಈಡಿಗ, ಬಿಲ್ಲವ, ದೀವರು ನಿರ್ಣಾಯಕರಾಗಿದ್ದೇವೆ. ನಾನು ಸಹ ಎಲೆಕ್ಷನ್ ಕಮಿಟಿಯಲ್ಲಿ ಇದ್ದೆ. ನಾಲ್ಕು ಜನ ಟಿಕೆಟ್ ವಂಚಿತರಾದರು. 2 ಬಿಲ್ಲವ, 1 ಈಡಿಗ, 1 ದೀವರು ವಂಚಿತರಾದರು.
    ಜಾತಿ ಹೆಸರಿನಲ್ಲಿ ರಾಜಕೀಯ ಮಾಡಿಲ್ಲ

    ಜಾತಿ ಹೆಸರಿನಲ್ಲಿ ರಾಜಕೀಯ ಮಾಡಿಲ್ಲ
    ಮಂಗಳೂರು ಉತ್ತರ ಮತ್ತು ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟಿದ್ದಾರೆ. ನಾವು ಅಲ್ಪಸಂಖ್ಯಾತರ ವಿರೋಧಿಗಳು ಅಲ್ಲ ಎಂದ ಹರಿಪ್ರಸಾದ್, ನೀವು ಮುಂದೆ ಬರಬೇಕಾದರೆ ಅಲ್ಪಸಂಖ್ಯಾತರ ವಿರುದ್ಧ ಧ್ವನಿ ಎತ್ತಬಾರದು. ಅಲ್ಪಸಂಖ್ಯಾತರನ್ನು‌ ಮುಂದಿಟ್ಟು ನಮಗೆ ಟಿಕೆಟ್ ವಂಚಿತರನ್ನಾಗಿ ಮಾಡುತ್ತಾರೆ. ಲಿಂಗಾಯತರು, ಒಕ್ಕಲಿಗರು, ಬ್ರಾಹ್ಮಣರು, ಕುರುಬರು ಸಿಎಂ ಸ್ಥಾನಕ್ಕೆ ಹೋರಾಟ ಮಾಡ್ತಾರೆ. ಅವರು ಅಧಿಕಾರಕ್ಕೆ ಬರಬೇಕಾದರೆ ಅವರ ಸ್ಥಾನಗಳನ್ನು ಸ್ಥಾನ ಬಿಟ್ಟುಕೊಡಲಿ. ನಮ್ಮನ್ನು ಯಾಕೆ ಕಟ್ ಮಾಡ್ತಾರೆ, ನಾವು ಹೆಚ್ಚು ಇರುವ ಜಾಗದಲ್ಲಿ ಅವಕಾಶ ಕೊಡಬೇಕು. ನಾವೇನು ಮಂಡ್ಯ, ಬೆಳಗಾವಿಯಲ್ಲಿ ಕೊಡಿ ಎಂದು ಕೇಳಲ್ಲ. ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡುಗು ಕಡೆ ನಮ್ಮವರು ನಿರ್ಣಾಯಕ ನಾನು ಜಾತಿ ಹೆಸರಿನಲ್ಲಿ ರಾಜಕೀಯ ಮಾಡಿಲ್ಲ ಎಂದು ತಿಳಿಸಿದರು.

    ಸಂಘಟಿತರಾಬೇಕು, ಇಲ್ಲವೆಂದರೆ ಕಡೆಗಣಿಸುತ್ತಾರೆ
    ನಾನು ಎಂಪಿಯಾಗಿದ್ದಾಗ ಈಡಿಗ ಸಮುದಾಯ ಭವನಕ್ಕೆ, ಶಾಲೆ, ವಸತಿ ಶಾಲೆಗೆ ಹಣ ಕೊಟ್ಟಿದ್ದೇನೆ. ನಾರಾಯಣಗುರು ಅಭಿವೃದ್ಧಿ ನಿಗಮ ಮಾಡುತ್ತೇವೆ ಎಂದು ಘೋಷಣೆ ಮಾಡಿದರು, ಅದಕ್ಕೆ ಹಣ ಕೊಟ್ಟಿಲ್ಲ. ನಾವು ಒತ್ತಡ ತಂದಿದ್ದೇವೆ, ಇದು ನಮಗೆ ಒಳ್ಳೆಯದಾಗುವ ಪ್ರಶ್ನೆಯಲ್ಲ. ಮುಂದಿನ ಪೀಳಿಗೆಗೆ ಒಳ್ಳೆಯದಾಗಬೇಕು. ಮಂಗಳೂರಿನಲ್ಲಿ 600 ಜನ ಜೈಲಿಗೆ ಹೋದರು, ಅವರ ಪೈಕಿ 400 ಜನ ಬಿಲ್ಲವರು. ಯಾಕೆ ಜೈಲಿಗೆ ಕಳಿಸಿದ್ರಂತೆ, ಯಾರದ್ದೊ ತೆವಲಿಗೆ ಕೊಲೆ‌ ಮಾಡೋದು, ಕೊಲೆ ಆಗೋದು. ನಾರಾಯಣಗುರು ಸಿದ್ದಾಂತ ನಾವು ಮರೆತಿದ್ದೇವೆ, ನಾವು ಸಂಘಟಿತರಾಬೇಕು, ಇಲ್ಲ ಅಂದರೆ ಕಡೆಗಣಿಸುತ್ತಾರೆ. ಹಿಂದೆ ಜಾಲಪ್ಪ ಅವರಿಂದ ಎಲ್ಲಾ ಸಹಾಯ ಪಡೆದುಕೊಂಡರು. ಅವರ ಮೊಮ್ಮಗನಿಗೆ ಟಿಕೆಟ್ ಕೊಡಬೇಕಾದರೆ, ಜಾಲಪ್ಪ ಅವರ ಮೊಮ್ಮಗನೆ ಅಲ್ಲ ಎನ್ನುವ ಮಟ್ಟಕ್ಕೆ ಚರ್ಚೆ ಮಾಡಿದರು ಎಂದು ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.

    ಸಿಎಂ ಮಾಡೋದು, ಕೆಳಗೆ ಇಳಿಸೋದು ಗೊತ್ತಿದೆ
    1985 ರವರೆಗೆ ಅಬಕಾರಿ ಗುತ್ತಿಗೆದಾರರು ಸರ್ಕಾರ ಮಾಡುತ್ತಿದ್ದರು. 2008 ರಲ್ಲಿ ಯಡಿಯೂರಪ್ಪ ಅವರು ಸಾರಾಯಿ ಬ್ಯಾನ್ ಮಾಡಿದರು. ಬೇರೆ ಜಾತಿಯ ಕಸುಬಿಗೆ ಕೈ ಹಾಕಿದ್ದರೆ ಇಷ್ಟೊತ್ತಿಗೆ ರಕ್ತಪಾತ ಅಗಿರೋದು. ನಾವು ಸುಮ್ಮನೆ ಪಾನಿಪುರಿ, ತರಕಾರಿ ಮಾರಾಟ ಮಾಡ್ತಾ ಇದ್ದೇವೆ. ಬಿಜೆಪಿಯವರು ಇದ್ದರೆ ತಪ್ಪು ತಿಳಿಯಬೇಡಿ ಪಕ್ಷದ ವಿರುದ್ಧ ಮಾತಾಡುತ್ತಿಲ್ಲ. ಬಹಳ ವ್ಯವಸ್ಥೆವಾಗಿ ತುಳಿಯುವ ಪ್ರಯತ್ನ ಮಾಡ್ತಾರೆ. ನಾನು ಮಂತ್ರಿ ಆಗೋದು ಬಿಡುದೋ ಬೇರೆ ಪ್ರಶ್ನೆ, 5 ಸಿಎಂ ಆಯ್ಕೆ ಮಾಡುವುದರಲ್ಲಿ ನಾನು ಪಾತ್ರವಹಿಸಿದ್ದೇನೆ. ಛತ್ತೀಸ್ಗಢದ ಸಿಎಂ ನಮ್ಮ ನೆಂಟರು ಅಲ್ಲ, ಹಿಂದುಳಿದ ವರ್ಗದವರನ್ನು ಸಿಎಂ ಮಾಡಿದ್ದೇನೆ. ಸಿಎಂ ಮಾಡೋದು, ಕೆಳಗೆ ಇಳಿಸೋದು ನನಗೆ ಚೆನ್ನಾಗಿ ಗೊತ್ತಿದೆ. ನಾನು ಯಾರ ಬಳಿಯೂ ಭಿಕ್ಷೆ ಬೇಡಲ್ಲ, ಎದೆ ಕೊಟ್ಟು ನಿಲ್ಲುತ್ತೇನೆ. ಇಲ್ಲ ಅಂದಿದ್ದರೆ ಬೆಂಗಳೂರಿನಲ್ಲಿ 49 ವರ್ಷ ರಾಜಕಾರಣ ಮಾಡಲು ಆಗುತ್ತಿರಲಿಲ್ಲ. ಓಡಿಸಿ ಬಿಡುತ್ತಿದ್ದರು ಎಂದು ಹೇಳಿದರು.

    ಕಾಮಿಡಿ ದಂತಕಥೆ ಚಾರ್ಲಿ ಚಾಪ್ಲಿನ್ ಪುತ್ರಿ, ನಟಿ ಜೋಸೆಫೀನ್ ನಿಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts