More

    ಕೇಂದ್ರವನ್ನು ದೂರುವುದರಲ್ಲೇ ಕಾಲಹರಣ: ಬಿಎಸ್‌ವೈ

    ಶಿವಮೊಗ್ಗ: ರಾಜ್ಯ ಸರ್ಕಾರ ಪ್ರತಿದಿನ ಕೇಂದ್ರ ಸರ್ಕಾರವನ್ನು ದೂಷಿಸುವುದರಲ್ಲೇ ಕಾಲಹರಣ ಮಾಡುತ್ತಿದೆ. ಜನರಿಗೆ ಕೇವಲ ಭರವಸೆಗಳನ್ನು ನೀಡುತ್ತಿದೆ. ಇದೇ ಸ್ಥಿತಿ ಮುಂದುವರಿದರೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯು ಪ್ರತಿಭಟನೆ ಹಾದಿ ಹಿಡಿಯಬೇಕಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದರು.

    ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದಲೂ ಪ್ರಕೃತಿ ವಿಕೋಪಗಳನ್ನು ಎದುರಿಸಿದ್ದೇನೆ. ನಾನೆಂದೂ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಲಿಲ್ಲ. ಎಲ್ಲವನ್ನೂ ವ್ಯವಸ್ಥಿತವಾಗಿ ನಿರ್ವಹಣೆ ಮಾಡಿದ್ದೆ. ಈಗ ರಾಜ್ಯ ಸರ್ಕಾರದ ಶೈಲಿಯೇ ಬೇರೆಯದಾಗಿದೆ ಎಂದು ಹರಿಹಾಯ್ದರು.
    ಸರ್ಕಾರ ದಿವಾಳಿಯಾಗಿದೆ. ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಯಾವುದೇ ಅನುದಾನ ಬಿಡುಗಡೆಯಾಗುತ್ತಿಲ್ಲ. ಅಭಿವೃದ್ಧಿಯಲ್ಲಿ ಕರ್ನಾಟಕ ಹಿಂದಕ್ಕೆ ಹೋಗುತ್ತಿದೆ ಎಂದು ಟೀಕಿಸಿದರು.
    ಲೋಕಸಭಾ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಬಿಜೆಪಿಗೆ ಉತ್ತಮ ವಾತಾವರಣವಿದೆ. ಶಿವಮೊಗ್ಗದಲ್ಲಿ ರಾಘವೇಂದ್ರ ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ಮೇ 1ರಿಂದ ನಾನು ಬೇರೆ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದೇನೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts