ಅಮೃತಸರ: ಸಿಖ್ ಸಮುದಾಯದ ಪ್ರಮುಖ ಧಾರ್ಮಿಕ ಕ್ಷೇತ್ರ ಸ್ವರ್ಣ ಮಂದಿರದ ಬಳಿ ಬಾಂಬ್ ಸ್ಪೋಟವಾಗಿದ್ದು ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕಾಗಮಿಸಿದ ಬಾಂಬ್ ಸ್ಕ್ವಾಡ್ ಸ್ಪೋಟಕ್ಕೆ ಸಂಬಂಧಿಸಿದ ವಸ್ತು ಹಾಗೂ ಪುಡಿಗಳನ್ನು ವಶಕ್ಕೆ ಪಡೆದಿದ್ದು ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಣ್ಣಪುಟ್ಟ ಗಾಯ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಮೃತಸರ ಪೊಲೀಸ್ ಆಯುಕ್ತ ನೌನಿಹಾಲ್ ಸಿಂಗ್ ಪ್ರಕರಣದ ಕುರಿತು ಈಗಲೇ ಏನು ಹೇಳಲು ಸಾಧ್ಯವಿಲ್ಲ.
ಇದನ್ನೂ ಓದಿ: ಖರ್ಗೆ ಕುಟುಂಬಕ್ಕೆ ಬೆದರಿಕೆ ಪ್ರಕರಣ; ಆಡಿಯೋ ನಕಲಿ ಎಂದ ಮಣಿಕಂಠ ರಾಥೋಡ್
ಸ್ಪೋಟಕ್ಕೆ ಸಂಬಂಧಿಸಿದಂತೆ ಆಟೋರಿಕ್ಷಾದಲ್ಲಿ ಸಂಚರಿಸುತ್ತಿದ್ದ ಆರು ಯುವತಿಯರಿಗೆ ಗಾಜಿನ ಚೂರು ತಗುಲಿ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.
ವದಂತಿಗೆ ಕಿವಿಗೊಡಬೇಡಿ
ಇನ್ನು ಬಾಂಬ್ ಸ್ಪೋಟದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹರಿ ಬಿಡಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು ಯಾರು ಹೆಚ್ಚಿನ ಗಮನ ಹರಿಸಬೇಡಿ ಎಂದು ಪಂಜಾಬ್ ಪೊಲೀಸರು ಟ್ವೀಟ್ ಮಾಡಿ ವಿನಂತಿಸಿದ್ಧಾರೆ.
ಇನ್ಉ ಸ್ಪೋಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಪೊಲೀಸರು ಸ್ಪೋಟದ ಕುರಿತು ನಿಖರ ಕಾರಣ ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.