ಪೊಲೀಸ್​ ವಾಹನದ ಮೇಲೆ ಮಾವೋವಾದಿಗಳ ದಾಳಿ; 10 ಅಧಿಕಾರಿಗಳು ಹುತಾತ್ಮ

bomb blast

ರಾಯ್​ಪುರ: ಪೊಲೀಸ್​ ವಾಹನದ ಮೇಲೆ ಮಾವೋವಾದಿಗಳು ನಡೆಸಿದ ಬಾಂಬ್​ ದಾಳಿ ನಡೆಸಿದ್ದು ಇದರಲ್ಲಿ ಓರ್ವ ನಾಗರಿಕ ಸೇರಿದಂತೆ 10 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಛತ್ತೀಸ್​ಗಢದ ಬಸ್ಥಾರ್​ ಜಿಲ್ಲೆಯ ದಂತೇವಾಡದಲ್ಲಿ ಘಟನೆ ನಡೆದಿದ್ದು ಸುಧಾರಕ ಸ್ಪೋಟಕಗಳನ್ನು ಕೃತ್ಯಕ್ಕೆ ಬಳಸಲಾಗಿದೆ ಎಂದು ವರದಿಯಾಗಿದೆ.

ಹಿಂತಿರುಗುವ ವೇಳೆ ಘಟನೆ

ಛತ್ತೀಸ್​ಗಢದ ರಾಜ್ಯ ಗುಪ್ತಚರ ಇಲಾಖೆ ಮಾಹಿತಿಯನ್ನು ಆಧರಿಸಿ ಪೊಲೀಸರು ಆ್ಯಂಟಿ ಮಾವೋಈಸ್ಟ್​ ಕಾರ್ಯಾಚರಣೆಯನ್ನು ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಇದನ್ನೂ ಓದಿ: ಬುಡಕಟ್ಟು ಬಾಲಕಿ ಹತ್ಯೆ ಪ್ರಕರಣ; ಪೊಲೀಸ್​ ಠಾಣೆಗೆ ಬೆಂಕಿ

ಮೃತ ಪೊಲೀಸ್​ ಅಧಿಕಾರಿಗಳು ಜಿಲ್ಲಾ ಸಶಸ್ತ್ರ ಮೀಸಲು ಪಡೆ(DRG)ಗೆ ಸೇರಿದ್ದವರು ಎಂದು ತಿಳಿದು ಬಂದಿದ್ದು ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಹಿಂತಿರುಗುವ ವೇಳೆ ದಾಳಿ ಮಾಡಲಾಗಿದೆ.

ಮಾಹಿತಿ ಪಡೆದ ಅಮಿತ್​ ಷಾ

ಇನ್ನು ಪೊಲೀಸರ ಮೇಲೆ ಮಾವೋವಾದಿಗಳ ದಾಳಿ ಕುರಿತು ಛತ್ತೀಗಢದ ಮುಖ್ಯಮಂತ್ರಿ ಬೂಪೇಶ್​ ಬಘೇಲ್​ರಿಂದ ಕೇಂದ್ರ ಗೃಹ ಸಚಿವ ಅಮಿತ್​ ಷಾ ಮಾಹಿತಿ ಪಡೆದಿದ್ದು ಶೀಘ್ರ ಕ್ರಮದ ಭರವಸೆಯನ್ನು ನೀಡಿದ್ದಾರೆ.

ಇದು ಅತ್ಯಂತ ದುಃಖಕರ ಸುದ್ದಿಯಾಗಿದ್ದು ಮೃತರ ಕುಟುಂಬಸ್ಥರ ನೋವಿನಲ್ಲಿ ನಾವು ಭಾಗಿಯಾಗುತ್ತೇವೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮುಖ್ಯಮಂತ್ರಿ ಭೂಪೇಶ್​ ಭಘೇಲ್​ ಟ್ವೀಟ್​ ಮಾಡಿದ್ದಾರೆ.

Share This Article

ಮಂಗಳನ ಸಂಚಾರದಿಂದ ರೂಪುಗೊಳ್ಳಲಿದೆ ಮಂಗಳ-ಪುಷ್ಯ ಯೋಗ! ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs

Zodiac Signs : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನಗಳು ಹಾಗೂ ಗ್ರಹಗಳ ಸಂಚಾರವೂ ವ್ಯಕ್ತಿಯು ಜನಿಸಿದ…

ನಿಮ್ಮನೆ ಮುದ್ದಿನ ನಾಯಿ ನಿಮ್ಮ ಮುಖವನ್ನು ನೆಕ್ಕುತ್ತದೆಯೇ? ಇರಲಿ ಎಚ್ಚರ.. Dog Licking Human Face

Dog Licking Human Face: ಆಧುನಿಕ ಜೀವನದಲ್ಲಿ ಹೆಚ್ಚಿನ ಜನರು ತಮ್ಮ ಮನೆಯಲ್ಲಿ ನಾಯಿಮರಿಗಳನ್ನು ಮನೆ…

ತಾಮ್ರದ ಉಂಗುರ ಧರಿಸುವುದು ಒಳ್ಳೆಯದಾ? ಕೆಟ್ಟದ್ದಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Copper Ring

Copper Ring : ಅನೇಕ ಜನರು ಬೆರಳುಗಳಿಗೆ ಉಂಗುರಗಳನ್ನು ಧರಿಸುತ್ತಾರೆ. ಕೆಲವರಿಗೆ ಇದು ಫ್ಯಾಶನ್​ ಆಗಿದ್ದಾರೆ,…