ನೆಲಮಂಗಲ: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಅಂಧ ದಂಪತಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ರಾಜಧಾನಿಯಲ್ಲಿ ಇಂದು (ಫೆ.23) ನಡೆದಿದೆ.
ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಶ್ರೀಧರ್ (52) ಮತ್ತು ಅರ್ಚನಾ (35) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟರು.
ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿದು ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. (ಏಜೆನ್ಸೀಸ್)
ಬಾಲಿವುಡ್ ಬ್ಯೂಟಿ ಜಾಹ್ನವಿಗೆ RCBಯ ಈ ಇಬ್ಬರು ಆಟಗಾರರು ಅಂದ್ರೆ ಸಿಕ್ಕಾಪಟ್ಟೆ ಇಷ್ಟವಂತೆ!