More

    ಅಖಂಡ ಶ್ರೀನಿವಾಸ ಮೂರ್ತಿಗೆ ಬೆಂಬಲ ನೀಡಿದ್ದಕ್ಕೆ ಕಾಂಗ್ರೆಸ್​ ಬ್ಲಾಕ್​ ಅಧ್ಯಕ್ಷ ಅಮಾನತು!

    ಬೆಂಗಳೂರು: ಅಖಂಡ ಶ್ರೀನಿವಾಸ ಮೂರ್ತಿಗೆ ಬೆಂಬಲ ಹಿನ್ನೆಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೊಬ್ಬರು ಅಮಾನತ್ತಾಗಿದ್ದಾರೆ.

    ಪುಲಿಕೇಶಿ ನಗರ ಕ್ಷೇತ್ರದ ಡಿಜೆ ಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಬರೀದ್ ಡಿಕೆಶಿ ಸೂಚನೆ ಮೇರೆಗೆ ಅಮಾನತ್ತಾಗಿದ್ದಾರೆ. ಇವರನ್ನು ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ರಾಜ್ ಕುಮಾರ್ ಆದೇಶದ ಮೇರೆಗೆ ಅಮಾನತ್ತು ಮಾಡಲಾಗಿದೆ.

    ಅಮಾನತ್ತು ಪತ್ರದಲ್ಲಿ “ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಪುಲಿಕೇಶಿನಗರ ವಿಧಾನ ಸಭಾ ಕ್ಷೇತ್ರದ ಡಿ.ಜೆ.ಹಳ್ಳಿ ಬ್ಲಾಕ್ ಅಧ್ಯಕ್ಷರಾದ ಶ್ರೀ. ಅಬ್ದುಲ್ ಬರೀದ್ ಆದ ನೀವು ವಿಧಾನ ಸಭಾ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದೀರೆಂದು ಹಲವಾರು ದೂರು ಬಂದಿರುತ್ತದೆ. ಈ ಹಿನ್ನಲೆಯಲ್ಲಿ ಕೆ.ಪಿ.ಸಿ.ಸಿ ಸೂಚನೆಯ ಮೇರೆಗೆ ಪಕ್ಷದಿಂದ ತಕ್ಷಣ ಜಾರಿಗೆ ಬರುವಂತೆ ನಿಮ್ಮನ್ನು ಅಮಾನತ್ತು ಮಾಡಲಾಗಿದೆ” ಎಂದು ಬರೆಯಲಾಗಿದೆ.

    ಅಖಂಡ ಶ್ರೀನಿವಾಸ ಮೂರ್ತಿಗೆ ಬೆಂಬಲ ನೀಡಿದ್ದಕ್ಕೆ ಕಾಂಗ್ರೆಸ್​ ಬ್ಲಾಕ್​ ಅಧ್ಯಕ್ಷ ಅಮಾನತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts