ರಕ್ತದಾನದಿಂದ ಆರೋಗ್ಯ ವೃದ್ಧಿ

blank

ಶನಿವಾರಸಂತೆ: ಆರೋಗ್ಯವಂತ ವ್ಯಕ್ತಿ ಕಾಲಕಾಲಕ್ಕೆ ರಕ್ತದಾನ ಮಾಡುವ ಮೂಲಕ ಇತರರ ಜೀವ ಉಳಿಸಲು ಸಹಕಾರಿಯಾಗಬೇಕು ಎಂದು ಮಡಿಕೇರಿ ರಕ್ತ ನಿಧಿ ಕೇಂದ್ರದ ಅಧಿಕಾರಿ ಡಾ.ಕೆ.ಕರುಂಬಯ್ಯ ಕರೆ ನೀಡಿದರು.

ಈದ್ ಮಿಲಾದ್ ಅಂಗವಾಗಿ ಶನಿವಾರಸಂತೆ ಮಿಲಾದ್ ಕಮಿಟಿಯಿಂದ ಪಟ್ಟಣದ ಈದ್ಗಾ ಮಸೀದಿಯಲ್ಲಿ ಹಮ್ಮಿಕೊಂಡಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ಆರೋಗ್ಯವಂತ ವ್ಯಕ್ತಿ 3 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಇದು ಆರೋಗ್ಯ ವೃದ್ಧಿಗೆ ಸಹಕಾರಿ, ರಕ್ತದೊತ್ತಡ ನಿವಾರಣೆ, ಹೃದಯ ಸಂಬಂಧಿ ಕಾಯಿಲೆಯಿಂದ ದೂರಾಗಲು ರಕ್ತದಾನ ಸಹಕಾರಿ ಎಂದು ಹೇಳಿದರು.

ಶನಿವಾರಸಂತೆ ಜಾಮೀಯ ಮಸೀದಿ ಅಧ್ಯಕ್ಷ ಜಾನಾಬ್ ರಿಶಾತ್ ಪಾಷ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮೌಲಾನ ಸಾಧಿಕ್, ಮುನ್ನಾವರ್ ಪಾಷ, ಮಹಮ್ಮದ್ ಶಾದಿಕ್, ಅಕ್ಮಲ್ ಪಾಷ ಇತರರು ಇದ್ದರು.

Share This Article

ಪ್ರತಿದಿನ ಶುಂಠಿ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಶುಂಠಿಯು ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಮಸಾಲೆಯಾಗಿದೆ. ಇದನ್ನು ಪ್ರಪಂಚದಾದ್ಯಂತ ಅಡುಗೆ ಮತ್ತು ಗಿಡಮೂಲಿಕೆಗಳ ಪರಿಹಾರಗಳಲ್ಲಿ ಬಳಸಲಾಗುತ್ತದೆ.…

ವ್ಯಾಯಾಮವು ದೇಹಕ್ಕೆ ಮಾತ್ರವಲ್ಲ ಮೆದುಳಿಗೂ ಮುಖ್ಯ; ಹೇಗೆ.. ಇಲ್ಲಿದೆ ಮಾಹಿತಿ | Health Tips

ವಯಸ್ಸು ಹೆಚ್ಚಾದಂತೆ ಸ್ಮರಣಶಕ್ತಿ ದುರ್ಬಲಗೊಳ್ಳುತ್ತದೆ. ಆದರೆ ಇಂದಿನ ಕಾಲದಲ್ಲಿ ಚಿಕ್ಕ ವಯಸ್ಸಿನಲ್ಲೇ ವಿಷಯಗಳನ್ನು ನೆನಪಿಟ್ಟುಕೊಳ್ಳಲು ಅಥವಾ…

ಭಾರತದ ಈ 7 ನಗರಗಳಲ್ಲಿ ಮಾಂಸದೂಟ ಸಂಪೂರ್ಣ ನಿಷೇಧ! ಸಸ್ಯಾಹಾರಿ ಆಹಾರಕ್ಕೆ ಮಾತ್ರ ಅವಕಾಶ | No Meat City

No Meat Cities: ಭಾರತ ಒಂದು ವೈವಿಧ್ಯಮಯ ಸಂಸ್ಕೃತಿಗಳು ಮತ್ತು ಪಾಕಪದ್ಧತಿಗಳ ದೇಶ. ಇಲ್ಲಿನ ಸಂಸ್ಕೃತಿ,…