More

    ಅಲೆಯಬ್ಬರಕ್ಕೆ ಮಗುಚಿದ ನಾಡದೋಣಿ, ಮೀನುಗಾರರು ಅಪಾಯದಿಂದ ಪಾರು

    ಗಂಗೊಳ್ಳಿ: ಗಂಗೊಳ್ಳಿ ಸಮೀಪ ಅರಬ್ಬಿ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ನಾಡ ದೋಣಿಯೊಂದು ಮಗುಚಿ ಬಿದ್ದಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
    ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನಿಂದ ಗುರುವಾರ ಬೆಳಗ್ಗೆ ರತ್ನಿ ಖಾರ್ವಿ ಮಾಲೀಕತ್ವದ ಸೌಮ್ಯಾ ಹೆಸರಿನ ನಾಡದೋಣಿಯಲ್ಲಿ ಗಂಗೊಳ್ಳಿಯ ಗುರುರಾಜ ಖಾರ್ವಿ (30), ಮಿಥುನ್ ಖಾರ್ವಿ (25), ಚಂದ್ರ ಖಾರ್ವಿ (45) ಮತ್ತು ರೋಶನ್ (35) ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಗಂಗೊಳ್ಳಿಯಿಂದ ಸುಮಾರು 7 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಅಲೆಗಳ ಅಬ್ಬರಕ್ಕೆ ಸಿಲುಕಿದ ದೋಣಿ ಮಗುಚಿ ಬಿದ್ದಿದೆ. ಇಬ್ಬರು ನೀರಿಗೆ ಹಾರಿ ಈಜಿ ಇನ್ನೊಂದು ದೋಣಿ ಮೂಲಕ ಸುರಕ್ಷಿತವಾಗಿ ದಡ ಸೇರಿದ್ದರೆ, ಇನ್ನಿಬ್ಬರನ್ನು ಸಮೀಪದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ. ಮಗುಚಿಬಿದ್ದ ದೋಣಿ, ಇಂಜಿನ್ ಮತ್ತು ಬಲೆ ಸಮುದ್ರಪಾಲಾಗಿದ್ದು, ಸುಮಾರು 5 ಲಕ್ಷ ರೂಪಾಯಿಗೂ ಮಿಕ್ಕಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts