Boat sinking: ಅರಬ್ಬಿ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಬೋಟ್‌ 5 ಮೀನುಗಾರರ ರಕ್ಷಣೆ

Boat sinking

ಭಟ್ಕಳ /Boat sinking: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಬೋಟೊಂದು ಕುಮಟಾ ವ್ಯಾಪ್ತಿಯಲ್ಲಿ ಮೀನುಗಾರಿಕೆ ಮುಗಿಸಿ ಮರಳಿ ತೆರಳುವಾಗ ಭಟ್ಕಳದ ಸಮುದ್ರದಲ್ಲಿ ಮುಳುಗಿದ್ದು, ಬೋಟ್‌ನಲ್ಲಿದ್ದ ಚಾಲಕ ಸೇರಿದಂತೆ ಒಟ್ಟು 5ಜನ ಮೀನುಗಾರರನ್ನು ಸ್ಥಳೀಯ ನಾಡದೋಣಿಯ ಮೀನುಗಾರರು ರಕ್ಷಿಸಿ ಸುರಕ್ಷಿತವಾಗಿ ದಡಕ್ಕೆ ಕರೆದು ತಂದಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರದ ಅಶ್ವೀನಿ ಸುರೇಶ ಅವರಿಗೆ ಸೇರಿದ ವಿನಶ್ ಬೋಟ್ ಭಟ್ಕಳದ ಬಳಿಯ ಸಮುದ್ರದಲ್ಲಿ ಮುಳುಗಡೆಯಾಗಿದೆ. ಉಮೇಶ ಮೊಗೇರ ಎನ್ನುವ ಚಾಲಕ ಫೆ 2ರಂದು ಮಲ್ಪೆಯಿಂದ ಮೀನುಗಾರಿಕೆಗೆಂದು 5 ಜನ ಮೀನುಗಾರರೊಂದಿಗೆ ಮೀನುಗಾರಿಕೆಗೆ ತೆರಳಿದ್ದರು.

ಕುಮಟಾ ಸಮೀಪ Boat sinking

ಕುಮಟಾ ವ್ಯಾಪ್ತಿಯಲ್ಲಿ ಮೀನುಗಾರಿಕೆ ನಡೆಸಿ ಮರಳಿ ತೆರಳುವಾಗ ಬುಧವಾರ ಭಟ್ಕಳದ ಬಳಿಯ ಸಮುದ್ರದಲ್ಲಿ ಬೋಟಿನ ಅಡಿಭಾಗಕ್ಕೆ ಎನೊ ತಗುಲಿ ಬೋಟಿನೊಳಗೆ ನೀರು ತುಂಬಿ ಮುಳುಗಡೆಯಾಗುವ ಹಂತಕ್ಕೆ ಬಂದಿದೆ.

ಈ ಸಂದರ್ಬದಲ್ಲಿ ಭಟ್ಕಳದ ಸ್ವರ್ಣಗೌರಿ ಎನ್ನುವ ನಾಡದೋಣಿಯಲ್ಲಿದ್ದ ರಾಮಾ ಮೊಗೇರ, ಭರತ ಮೊಗೇರ ಮುಳುಗುತ್ತಿರುವ ಬೋಟಿನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ. ಅದಾದ ಬಳಿಕ ಬೋಟ್ ನೀರಿನಲ್ಲಿ ಸಂಪೂರ್ಣ ಮುಳುಗಿದ್ದು, ಅನೇಕ ಸಾಮಾಗ್ರಗಳ ಸಹಿತ ಸುಮಾರು 50ರಿಂದ 60ಲಕ್ಷ ರೂ ನಷ್ಟವಾಗಿದೆ ಎಂದು ಚಾಲಕ ಉಮೇಶ ಮೊಗೇರ ಭಟ್ಕಳ ಕರಾವಳಿ ಪೋಲಿಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

ಇದನ್ನೂ ಓದಿ: https://www.vijayavani.net/sapayi-karmachari-meeting

https://www.youtube.com/watch?v=yGRTTYLI8vM

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…