More

    ‘ಬೋಧಿವೃಕ್ಷ ಪ್ರಶಸ್ತಿ’14ರಂದು ಪ್ರದಾನ

    ಬೆಂಗಳೂರು: ಅಂಬೇಡ್ಕರ್ ಜಯಂತಿ ಅಂಗವಾಗಿ ತಳಸಮುದಾಯದ ಏಳಿಗೆಗೆ ಶ್ರಮಿಸಿದವರಿಗೆ ಸ್ಪೂರ್ತಿಧಾಮ ವತಿಯಿಂದ ನೀಡುವ 2024ನೇ ಸಾಲಿನ ‘ಬೋಧಿವೃಕ್ಷ’ ಪ್ರಶಸ್ತಿಗೆ ಹೋರಾಟಗಾರ ಎಸ್.ಆರ್. ಹಿರೇಮಠ್ ಭಾಜನರಾಗಿದ್ದಾರೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಒಳಗೊಂಡಿದೆ.

    ‘ಬೋಧಿವರ್ಧನ’ ಪ್ರಶಸ್ತಿಗೆ ಪತ್ರಕರ್ತ ರಾಮ್‌ದೇವ್ ರಾಖೆ, ಸಮಾಜಸೇವಕಿ ಸುಶೀಲ ನಾಡ, ಸಮಾಜಸೇವಕ ಹಸನಬ್ಬ, ಹೋರಾಟಗಾರ್ತಿ ಜಿ.ಕೆ. ಪ್ರೇಮ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು ತಲಾ 25 ಸಾವಿರ ರೂ. ನಗದು ಹೊಂದಿದೆ.

    ಮಾಗಡಿ ಮುಖ್ಯರಸ್ತೆಯ ಅಂಜನಾನಗರದ ಸ್ಪೂರ್ತಿಧಾಮದಲ್ಲಿ 14ರ ಸಂಜೆ 5 ಗಂಟೆಗೆ ನಡೆಯಲಿರುವ ‘ಅಂಬೇಡ್ಕರ್ ಹಬ್ಬ’ ಕಾರ್ಯಕ್ರಮದಲ್ಲಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಸಬಿಹಾ ಭೂಮಿಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಿವೃತ್ತ ಪ್ರಾದ್ಯಾಪಕ ಡಾ. ಟಿ.ಆರ್. ಚಂದ್ರಶೇಖರ, ಸ್ಪೂರ್ತಿಧಾಮದ ಅಧ್ಯಕ್ಷ ಎಸ್. ಮರಿಸ್ವಾಮಿ ಭಾಗವಹಿಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts