More

    ಪ್ರವೀಣ್ ನೆಟ್ಟಾರು ಕುಟುಂಬಕ್ಕೆ 11 ಲಕ್ಷ ರೂ.ನೆರವು ನೀಡಿದ ಬಾಲಿವುಡ್ ನಿರ್ಮಾಪಕ

    ಪುತ್ತೂರು: ಹಿಂದು ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿರುವ ಬಾಲಿವುಡ್ ನಿರ್ಮಾಪಕ ಹಾಗೂ ಉದ್ಯಮಿ ಮನೀಶ್ ಮುಂದ್ರಾ, ಪ್ರವೀಣ್ ಕುಟುಂಬಕ್ಕೆ 11 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾಗಿ ಟ್ವೀಟ್ ಮಾಡಿದ್ದಾರೆ.

    ಅವರು ಇತ್ತೀಚೆಗೆ ಪ್ರವೀಣ್ ಕುಟುಂಬದ ಬ್ಯಾಂಕ್ ಖಾತೆಯ ಮಾಹಿತಿಯನ್ನು ಟ್ವಿಟ್ಟರ್‌ನಲ್ಲಿ ಕೇಳಿದ್ದರು. ಬುಧವಾರ 11 ಲಕ್ಷ ರೂ. ದೇಣಿಗೆ ನೀಡಿರುವ ಮಾಹಿತಿ ಹಂಚಿಕೊಂಡಿದ್ದು, ಮೃತ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನಾ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿರುವುದಾಗಿಯೂ ತಿಳಿಸಿದ್ದಾರೆ.

    ಮನೀಶ್ ಮುಂದ್ರಾ ‘ಆಂಖೋನ್ ದೇಖಿ’, ‘ಮಸಾನ್’, ‘ಕದ್ವಿ ಹವಾ’ ಸೇರಿದಂತೆ ಅನೇಕ ಬಾಲಿವುಡ್ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. 2017ರಲ್ಲಿ ಅವರ ‘ಧನಕ್’ ಅತ್ಯುತ್ತಮ ಮಕ್ಕಳ ಚಲನಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದಿತ್ತು. ‘ನ್ಯೂಟನ್’ ಚಿತ್ರ ಆಸ್ಕರ್ ಪ್ರವೇಶ ಪಡೆದಿತ್ತು. ಕರೊನಾ ಸಂದರ್ಭ ದೇಶದ ಬಹುತೇಕ ಆಸ್ಪತ್ರೆಗಳಿಗೆ ಪಿಪಿಇ ಕಿಟ್‌ಗಳ ಸಹಾಯ ನೀಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts