ಹೈದರಾಬಾದ್: ಪಕ್ಕದ ಟಾಲಿವುಡ್ನಲ್ಲಿ ಗುರುತಿಸಿಕೊಂಡಿರುವ ನಟ ಬೆಲಂಕೊಂಡ ಸಾಯಿ ಶ್ರೀನಿವಾಸ್ ಇದೀಗ ಬಾಲಿವುಡ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡುವ ತಯಾರಿ ನಡೆಸಿದ್ದಾರೆ. ಈಗಾಗಲೇ ಸೌತ್ ಇಂಡಸ್ಟ್ರಿಯಲ್ಲಿ ಸೂಪರ್ ಹಿಟ್ ಸಿನಿಮಾ ಎನಿಸಿಕೊಂಡಿರುವ ಪ್ರಭಾಸ್ ನಟನೆಯ ಛತ್ರಪತಿ ಚಿತ್ರವನ್ನೇ ಹಿಂದಿಯಲ್ಲಿ ರಿಮೇಕ್ ಮಾಡಲಾಗುತ್ತಿದ್ದು, ಬೆಲಂಕೊಂಡ ಸಾಯಿ ಶ್ರೀನಿವಾಸ್ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಸೆಲೆಬ್ರಿಟಿಗಳ ಮಾಲ್ಡೀವ್ಸ್ ಭೇಟಿಯನ್ನು ಟ್ರೋಲ್ ಮಾಡಿದ ನೆಟ್ಟಿಗರು: ಹೊಟ್ಟೆ ಹುಣ್ಣಾಗಿಸುವ ಮೀಮ್ಗಳು!
ಪೆನ್ ಸ್ಟುಡಿಯೋಸ್ ಬ್ಯಾನರ್ನಲ್ಲಿ ಅದ್ದೂರಿ ವೆಚ್ಚದಲ್ಲಿ ಸಿದ್ಧವಾಗಲಿರುವ ಈ ಚಿತ್ರವನ್ನು ಡಾ. ಜಯಂತಿಲಾಲ್ ಗಡ ಬಂಡವಾಳ ಹೂಡುತ್ತಿದ್ದಾರೆ. ವಿಶೇಷ ಏನೆಂದರೆ, ಬೆಲಂಕೊಂಡ ಶ್ರೀನಿವಾಸ ಅವರ ಮೊದಲ ಸಿನಿಮಾ ಅಲ್ಲುಡು ಸೀನು ಸಿನಿಮಾ ನಿರ್ದೇಶನ ಮಾಡಿದ್ದ ವಿವಿ ವಿನಾಯಕ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಇವರಿಗೂ ಇದು ಮೊದಲ ಬಾಲಿವುಡ್ ಸಿನಿಮಾವಾಗಿದೆ.
ಮೂಲ ಛತ್ರಪತಿ ಸಿನಿಮಾವನ್ನು ರಾಜಮೌಳಿ ನಿರ್ದೇಶನ ಮಾಡಿದ್ದು, ಪ್ರಭಾಸ್, ಶ್ರೀಸರಣ್ ಸೇರಿ ಸಾಕಷ್ಟು ಮಂದಿ ಸ್ಟಾರ್ ಕಲಾವಿದರು ನಟಿಸಿದ್ದರು. ಇದೀಗ ಅದೇ ಚಿತ್ರವನ್ನು ವಿವಿ ವಿನಾಯಕ್ ಬಾಲಿವುಡ್ನಲ್ಲಿ ನಿರ್ದೇಶನ ಮಾಡಲಿದ್ದು, ಈಗಿನ ಕಾಲಘಟ್ಟಕ್ಕೆ ತಕ್ಕಂತೆ ಒಂದಷ್ಟು ಬದಲಾವಣೆಯನ್ನೂ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಪ್ರೀ ಪ್ರೊಡಕ್ಷನ್ ಕೆಲಸ ಶುರುವಾಗಿದ್ದು, ಶೀಘ್ರದಲ್ಲಿ ಸಿನಿಮಾ ಕುರಿತ ಹೆಚ್ಚಿನ ಮಾಹಿತಿಯನ್ನು ತಂಡ ಹೇಳಿಕೊಳ್ಳಲಿದೆ.
ಇದನ್ನೂ ಓದಿ: ಮುತ್ತಪ್ಪ ರೈ ಬಯೋಪಿಕ್: ರವಿ ಶ್ರೀವತ್ಸ ಹೊಸ ಚಿತ್ರ ಎಂಆರ್
ರಿಮೇಕ್ ಸಿನಿಮಾ ಮಾಡುವುದರಲ್ಲಿ ಸಿದ್ಧ ಹಸ್ತರಾಗಿರುವ ನಿರ್ದೇಶಕ ವಿನಾಯಕ, ತಮಿಳಿನ ಕೈದಿ ಚಿತ್ರವನ್ನು ತೆಲುಗಿನಲ್ಲಿ ಕೈದಿ ನಂ.150 ಸಿನಿಮಾ ಮಾಡುವ ಮೂಲಕ ಮೆಗಾಸ್ಟಾರ್ ಚಿರಂಜೀವಿಯವರನ್ನು ಮರಳಿ ಚಿತ್ರರಂಗಕ್ಕೆ ಕರೆತಂದಿದ್ದರು. ಇದೀಗ ಛತ್ರಪತಿ ಸಿನಿಮಾ ಮೂಲಕ ಬಾಲಿವುಡ್ಗೆ ಹೊರಟಿದ್ದಾರೆ.
ಟಾಲಿವುಡ್ನಲ್ಲಿ 26/11 ದಾಳಿಯ ಸಿನಿಮಾ; ಉನ್ನಿಕೃಷ್ಣನ್ ಲುಕ್ನಲ್ಲಿ ಅಡಿವಿ ಶೇಷ