ಬಿಜೆಪಿ ಕಾರ್ಯಕರ್ತರ ಮೇಲೆ ಬಾಂಬ್ ಧಾಳಿ

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಬಿಸಿ ಏರುತ್ತಿರುವಂತೆ, ಪಕ್ಷಗಳ ನಡುವಿನ ಸಂಘರ್ಷವು ಹಿಂಸಾತ್ಮಕ ತಿರುವು ಪಡೆಯುತ್ತಿದೆ. ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಆರು ಬಿಜೆಪಿ ಕಾರ್ಯಕರ್ತರ ಮೇಲೆ ಕ್ರೂಡ್​ ಬಾಂಬ್‌ಗಳಿಂದ ಹಲ್ಲೆ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಕಾರ್ಯಕರ್ತರು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ತಮ್ಮ ಮೇಲೆ ಈ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಶುಕ್ರವಾರ ರಾತ್ರಿ, ಆರು ಬಿಜೆಪಿ ಕಾರ್ಯಕರ್ತರು ವಿವಾಹ ಸಮಾರಂಭವೊಂದನ್ನು ಮುಗಿಸಿ ವಾಪಸಾಗುತ್ತಿದ್ದಾಗ, ದುಷ್ಕರ್ಮಿಗಳು ಅವರ ಮೇಲೆ ಕ್ರೂಡ್ ಬಾಂಬ್​ಗಳನ್ನು ಎಸೆದಿದ್ದಾರೆ. … Continue reading ಬಿಜೆಪಿ ಕಾರ್ಯಕರ್ತರ ಮೇಲೆ ಬಾಂಬ್ ಧಾಳಿ