ಕೆಕೆ ಎಕ್ಸ್​ಪ್ರೆಸ್​ಗೆ ಬಾಂಬ್ ಬೆದರಿಕೆ

blank

ಕಲಬುರಗಿ: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಕರ್ನಾಟಕ (ಕೆಕೆ) ಎಕ್ಸ್​ಪ್ರೆಸ್ ರೈಲಿನಲ್ಲಿ ಬಾಂಬ್ ಇದೆ ಎಂಬ ಬೆದರಿಕೆ ಕರೆ ಹಿನ್ನೆಲೆಯಲ್ಲಿ ವಾಡಿ ನಿಲ್ದಾಣದಲ್ಲಿ ಭಾನುವಾರ ಬೆಳಗಿನ ಜಾವ ನಾಲ್ಕು ಗಂಟೆ ತಪಾಸಣೆ ನಡೆಸಲಾಯಿತು.

blank

ಹುಸಿ ಕರೆ ಎಂದು ಖಚಿತವಾದ ಬಳಿಕ ನಿಟ್ಟುಸಿರು ಬಿಟ್ಟ ಅಧಿಕಾರಿಗಳು, ಉತ್ತರ ಪ್ರದೇಶ ಮೂಲದ ದೀಪಸಿಂಗ್ ಠಾಕೂರ್ ಎಂಬಾತನನ್ನು ಬಂಧಿಸಿದ್ದಾರೆ. ಜನರಲ್ ಕೋಚ್​ನಲ್ಲಿ ಪ್ರಯಾಣಿಸುತ್ತಿದ್ದ ದೀಪಸಿಂಗ್ ಆರ್​ಪಿಎಫ್ ಅಧಿಕಾರಿಗಳಿಗೆ ಕರೆ ಮಾಡಿ ರೈಲಿನಲ್ಲಿ ಬಾಂಬ್ ಇಡಲಾಗಿದೆ ಎಂದು ಸುಳ್ಳು ಹೇಳಿದ್ದಾನೆ. ತಕ್ಷಣ ರೈಲ್ವೆ ಪೊಲೀಸ್, ಆರ್​ಪಿಎಫ್, ಬಾಂಬ್ ನಿಷ್ಕ್ರಿಯ ದಳದವರು ಕಲಬುರಗಿಯಲ್ಲಿ ರಾತ್ರಿ 1.30ಕ್ಕೆ ರೈಲು ತಡೆದು ಮುಂಜಾನೆ 4.30ರವರೆಗೆ ತಪಾಸಣೆ ನಡೆಸಿ ಹುಸಿ ಕರೆ ಎಂಬುದನ್ನು ದೃಢಪಡಿಸಿಕೊಂಡಿದ್ದಾರೆ.

ದೀಪಸಿಂಗ್ ಠಾಕೂರ್ ಪ್ರಯಾಣಿಕರೊಂದಿಗೆ ಜಗಳ ಮಾಡಿಕೊಂಡು ಎಲ್ಲರಿಗೂ ಪಾಠ ಕಲಿಸುವುದಾಗಿ ಹೇಳಿ ಪೊಲೀಸರಿಗೆ ಕರೆ ಮಾಡಿದ್ದ. ನಂತರ ಪೊಲೀಸರಿಗೆ ಹೆದರಿ ಫ್ಲೈಟ್ ಮೋಡ್​ಗೆ ಹಾಕಿದ್ದ. ಟ್ರೂ ಕಾಲರ್​ನಲ್ಲಿ ಆತನ ಚಿತ್ರ ಪರಿಶೀಲಿಸಿ ಪತ್ತೆ ಹಚ್ಚಿದ ಪೊಲೀಸರು, ವಶಕ್ಕೆ ಪಡೆದು ವಿಚಾರಿಸಿದಾಗ ಹುಸಿ ಕರೆ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ವಾಡಿ ಠಾಣೆ ಪಿಎಸ್​ಐ ವೀರಭದ್ರಪ್ಪ ವಿಜಯವಾಣಿಗೆ ತಿಳಿಸಿದ್ದಾರೆ.

Share This Article
blank

ಬಿಸಾಡುವ ಮುನ್ನ ತಿಳಿಯಿರಿ Watermelon Seeds ಪವರ್​​: ಇದರಲ್ಲಿದೆ 5 ನಂಬಲಾಗದ ಆರೋಗ್ಯ ಪ್ರಯೋಜನೆಗಳು

Watermelon Seeds: ಬೇಸಿಗೆಯಲ್ಲಿ ಬಿಸಿಲು ಜೋರಾದ ತಕ್ಷಣ ದೇಹವನ್ನು ತಂಪಾಗಿಸಲು ನಾವು ಹೆಚ್ಚಾಗಿ ಕಲ್ಲಂಗಡಿಯನ್ನು ಆಶ್ರಯಿಸುತ್ತೇವೆ.…

ಈ ಗಿಡಗಳನ್ನು ಬೆಳೆಸಿದರೆ ಸಾಕು, ನಿಮ್ಮ ಮನೆಗೆ ಒಂದೇ ಒಂದು ಸೊಳ್ಳೆಯೂ ಬರುವುದಿಲ್ಲ..Plants

Plants: ಮಳೆಗಾಲ ಬಂತೆಂದರೆ ಸಾಕು ಅನೇಕ ಜನರು ತಮ್ಮ ಮನೆಯಂಗಳದಲ್ಲಿ ವಿವಿಧ ಗಿಡಗಳನ್ನ ನೆಡಲು ಪ್ರಾರಂಭಿಸುತ್ತಾರೆ.…

blank