More

    ಉಳ್ಳಾಲದಲ್ಲಿ ಕ್ರೈಸ್ತ ಧರ್ಮ ಪ್ರಚಾರ ಸಾಮಗ್ರಿ ಹಂಚಿಕೆ: ಮತಾಂತರಕ್ಕೆ ಹುನ್ನಾರ ಆರೋಪ

    ಮಂಗಳೂರು: ಸೋಮೇಶ್ವರದಲ್ಲಿರುವ ಉಳ್ಳಾಲ ರೈಲ್ವೆ ನಿಲ್ದಾಣದ ಹಿಂಭಾಗದ 15 ಕ್ಕೂ ಅಧಿಕ ಹಿಂದೂಗಳ ಮನೆಗಳ ಗೇಟುಗಳಲ್ಲಿ ಅಪರಿಚಿತ ವ್ಯಕ್ತಿಯೋರ್ವ ಶುಕ್ರವಾರ ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರ ಹಾಗೂ ಪುಸ್ತಕಗಳನ್ನು ಇಟ್ಟು ಹೋಗಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದು, ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪುಸ್ತಕಗಳನ್ನು ವಶಕ್ಕೆ ಪಡೆದಿದ್ದಾರೆ.

    ಉಳ್ಳಾಲದಲ್ಲಿ ಕ್ರೈಸ್ತ ಧರ್ಮ ಪ್ರಚಾರ ಸಾಮಗ್ರಿ ಹಂಚಿಕೆ: ಮತಾಂತರಕ್ಕೆ ಹುನ್ನಾರ ಆರೋಪ

    ಹಿಂದೂ ಸಂಘಟನೆ ಕಾರ್ಯಕರ್ತರು ಭಿತ್ತಿ ಪತ್ರಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಅದರಲ್ಲಿರುವ ಮೊಬೈಲ್ ನಂಬರಿರುವ ವ್ಯಕ್ತಿಯನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ. ಲುಂಗಿ ಧರಿಸಿದ್ದ ಅಪರಿಚಿತ ವ್ಯಕ್ತಿ 15 ರಷ್ಟು ಮನೆಗಳ ಗೇಟುಗಳಲ್ಲಿ ಕ್ರೈಸ್ತ ಧರ್ಮ ವಿಚಾರಗಳ ಕುರಿತ ಕನ್ನಡ ಹಾಗೂ ಮಲಯಾಳಂನಲ್ಲಿ ಬರೆದಿರುವ ಭಿತ್ತಿಪತ್ರ, ಎರಡು ಪುಸ್ತಕಗಳನ್ನು ಮನೆಗಳ ಗೇಟಿನಲ್ಲಿರಿಸಿದ್ದಾನೆ. ಈ ಸಂದರ್ಭ ವೃದ್ಧೆಯೊಬ್ಬರು ವ್ಯಕ್ತಿಯನ್ನು ಗಮನಿಸಿ ಸೇಲ್ಸ್ ಮೆನ್ ಅಂದುಕೊಂಡು ತಮಗೇ ಯಾವುದೇ ಸೊತ್ತುಗಳು ಬೇಡ ಅಂದಿದ್ದಾರೆ. ಆದರೂ ಆತ ಅವರ ಗೇಟಿನಲ್ಲಿ ಪುಸ್ತಕ, ಭಿತ್ತಿಪತ್ರ, ಸ್ಟಿಕ್ಕರ್ ಇರಿಸಿ ಪರಾರಿಯಾಗಿದ್ದಾನೆ.

    ಘಟನೆಯಿಂದ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದು, ಮತಾಂತರ ನಡೆಸುವ ಉದ್ದೇಶದಿಂದಲೇ ಕೃತ್ಯ ಎಸಗಲಾಗಿದೆ ಅನ್ನುವ ಆರೋಪ ಮಾಡಿದ್ದಾರೆ. ಸ್ಥಳದಲ್ಲಿ ಉಳ್ಳಾಲದ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದಾರೆ. ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts