More

    ಆಟ ಆಡ್ತ ಆಡ್ತ ಕರೆಂಟ್ ಶಾಕ್​ ಹೊಡೆದು ಸಾವಿಗೀಡಾದ ಬಾಲಕ; ಟ್ರಾನ್ಸ್​​ಫಾರ್ಮರ್ ಕೆಳಗೆ ಬಿದ್ದಿತ್ತು ಪವರ್​ಫುಲ್​ ತಂತಿ..

    ಬೆಂಗಳೂರು: ಆಟ ಆಡುತ್ತಿದ್ದ ಮಕ್ಕಳು ದುರಂತ ಸಾವಿಗೀಡಾಗುತ್ತಿರುವ ಪ್ರಕರಣಗಳು ಮುಂದುವರಿದಿದ್ದು, ಇದೀಗ ಅಂಥದ್ದೇ ದುರಂತ ಸಾವಿಗೆ ಬಾಲಕನೊಬ್ಬ ಬಲಿಯಾಗಿದ್ದಾನೆ. ವಿಪರ್ಯಾಸವೆಂದರೆ ರಾಜಧಾನಿ ಬೆಂಗಳೂರಿನಲ್ಲೇ ಈ ಅವಘಡ ಸಂಭವಿಸಿದೆ.

    ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, 12 ವರ್ಷದ ಬಾಲಕ ಮಣಿ ಎಂಬಾತ ಮೃತಪಟ್ಟಿದ್ದಾನೆ. ಆಟವಾಡುತ್ತಿದ್ದ ಈತನಿಗೆ ವಿದ್ಯುತ್​ ಪ್ರವಹಿಸುತ್ತಿದ್ದ ತಂತಿ ಸ್ಪರ್ಶವಾಗಿದ್ದು, ಶಾಕ್​ ಹೊಡೆದು ಸಾವಿಗೀಡಾಗಿದ್ದಾನೆ.

    ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ; ನಾಳೆ 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..

    ಟ್ರಾನ್ಸ್​​ಫಾರ್ಮರ್ ಸಮೀಪ ಕೆಳಗೆ ಬಿದ್ದಿದ್ದ ತಂತಿಯಲ್ಲಿ ವಿದ್ಯುತ್​ ಪ್ರವಹಿಸುತ್ತಿದ್ದುದೇ ಈ ದುರಂತಕ್ಕೆ ಕಾರಣ. ಈ ಬಗ್ಗೆ ಹಲವು ಬಾರಿ ದೂರು ನೀಡಿದ್ದರೂ ಸಂಬಂಧಪಟ್ಟವರು ಕ್ರಮಕೈಗೊಂಡಿಲ್ಲ ಎಂದು ಸ್ಥಳೀಯರು ಪ್ರತಿಭಟನೆ ನಡೆಸಿ ಆರೋಪಿಸಿದ್ದಾರೆ. ವಿದ್ಯಾರಣ್ಯಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

    ಡಾಕ್ಟರ್​ ಆಗ್ತೀನಿ, ಫಾರಿನ್ನಲ್ಲೇ ಸೆಟ್ಲ್​ ಆಗ್ತೀನಿ, ಮದ್ವೆನೇ ಆಗಲ್ಲ ಎಂದಿದ್ದ ಅಪ್ಪು; ಬಾಲ್ಯದ ಆ ಸಂದರ್ಶನ ವೈರಲ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts