ಮಂಡ್ಯ: ನೀರಿನಲ್ಲಿ ಮುಳುಗಿ, ಕರೆಂಟ್ ಶಾಕ್ ತಗುಲಿ.. ಹೀಗೆ ಮಕ್ಕಳು ದುರಂತ ಅಂತ್ಯ ಕಾಣುತ್ತಿರುವ ಪ್ರಕರಣಗಳು ಮತ್ತೆ ಮತ್ತೆ ಸಂಭವಿಸುತ್ತಿದ್ದು, ಇದೀಗ ಇನ್ನೊಬ್ಬ ಬಾಲಕ ಅಂಥದ್ದೇ ಸಾವಿಗೀಡಾಗಿದ್ದಾನೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಆಟ ಆಡ್ತ ಆಡ್ತ ಕರೆಂಟ್ ಶಾಕ್ ಹೊಡೆದು ಸಾವಿಗೀಡಾದ ಬಾಲಕ; ಟ್ರಾನ್ಸ್ಫಾರ್ಮರ್ ಕೆಳಗೆ ಬಿದ್ದಿತ್ತು ಪವರ್ಫುಲ್ ತಂತಿ..
ಹತ್ತು ವರ್ಷದ ಗಗನ್ ಮೃತಪಟ್ಟ ಬಾಲಕ. ಈ ಹುಡುಗ ರಸ್ತೆಯಲ್ಲಿ ಆಟವಾಡುತ್ತಿದ್ದು, ಅದೇ ಸಮಯಕ್ಕೆ ಗೋಡೆಯೊಂದು ಕುಸಿದು, ಅದರಡಿಗೆ ಸಿಲುಕಿ ಬಾಲಕ ಮೃತಪಟ್ಟಿದ್ದಾನೆ. ಜವರೇಗೌಡ ಎಂಬವರ ಮನೆಯ ಗೋಡೆ ಕುಸಿದು ಈ ದುರಂತ ಸಂಭವಿಸಿದೆ.
ಇದನ್ನೂ ಓದಿ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು; ಒಬ್ಬನ ಶವ ಪತ್ತೆ, ಇನ್ನಿಬ್ಬರು ಇನ್ನೂ ನಾಪತ್ತೆ..
ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ಬಾಲಕ ತೀವ್ರ ಗಾಯಗೊಂಡಿದ್ದ. ಆತನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ. ಇದೇ ಘಟನೆಯಲ್ಲಿ ಮನೆಯ ಕೊಟ್ಟಿಗೆಯಲ್ಲಿದ್ದ ಎರಡು ಹಸು, ಕುರಿಗಳು ಕೂಡ ಸಾವಿಗೀಡಾಗಿವೆ.
ಇದನ್ನೂ ಓದಿ: ಆಟ ಆಡ್ತ ಆಡ್ತ ಸತ್ತು ಹೋದ ಬಾಲಕಿ: ಶಾಲೆ ತೆರೆದಿಲ್ಲ, ಮಕ್ಕಳು ಮನೇಲೇ ಇದ್ದಾರೆ ಅಂತಾದರೆ ಯಾವುದಕ್ಕೂ ಹುಷಾರಾಗಿರಿ..!
ಬೆಡ್ ಕೇಳಿದ ನಟಿಗೆ ಸಿಕ್ಕಿದ್ದು ಅರ್ಧಮಂಚ; ಒಂದು ಕೊಟ್ಟು ಇನ್ನೊಂದು ಕೊಟ್ಟಿಲ್ಲ ಎಂದು ಬೇಸರ..