More

    ಹೋಳಿ ಆಡಲು ಹೋದವನಿಗೆ ಶಾಕ್​; ಆಟಕ್ಕೂ ಮುನ್ನ ಪ್ರಾಣ ಕಳೆದುಕೊಂಡ ಬಾಲಕ..

    ವಿಜಯಪುರ: ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಇಲ್ಲೊಂದಷ್ಟು ಹುಡುಗರು ಇಂದು ಹೋಳಿ ಹಬ್ಬ ಮಾಡಿ ಸಂಭ್ರಮಿಸುತ್ತಿದ್ದರು. ಆದರೆ ದುರದೃಷ್ಟವಶಾತ್, ಅವರೆಲ್ಲ ಶೋಕದ ಮಡುವಿನಲ್ಲಿ ಮುಳುಗುವಂತಾಗಿದೆ. ಅಷ್ಟಕ್ಕೂ ಕಾರಣವಾಗಿದ್ದು ಅದೊಂದು ದುರಂತ.

    ವಿಜಯಪುರ ಜಿಲ್ಲೆ ಕೊಲ್ಹಾರ ತಾಲ್ಲೂಕಿನ ತಳೇವಾಡ ಗ್ರಾಮದಲ್ಲಿ ಈ ಅವಘಡ ಸಂಭವಿಸಿದ್ದು, ಹಣಮಂತ ಬೀರಪ್ಪ ವಾಲಿಕಾರ (12) ಎಂಬ ಬಾಲಕ ಸಾವಿಗೀಡಾಗಿದ್ದಾನೆ. ಈತ ಹೋಳಿಯಾಟಕ್ಕೆಂದು ಅಣಿಗೊಳಿಸುತ್ತಿದ್ದಾಗ ವಿದ್ಯುತ್ ಶಾಕ್​ಗೆ ಒಳಗಾಗಿ ಸಾವಿಗೀಡಾಗಿದ್ದಾನೆ.

    ಬಣ್ಣದಾಟಕ್ಕೆಂದು ಗ್ರಾಮ ಪಂಚಾಯಿತಿ ವತಿಯಿಂದ ನೀರಿನ ತೊಟ್ಟಿ ನಿರ್ಮಿಸಲಾಗಿತ್ತು. ಅದಕ್ಕೆ ನೀರು ತುಂಬುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ತುಂಡಾಗಿ ನೀರಿನ ತೊಟ್ಟಿಗೆ ಬಿದ್ದಿದೆ. ಇದರಿಂದ ವಿದ್ಯುತ್ ಶಾಕ್​ಗೆ ಒಳಗಾಗಿ ಈತ ಮೃತಪಟ್ಟಿದ್ದಾನೆ.

    ಘಟನೆಗೆ ಗ್ರಾಮ ಪಂಚಾಯತಿಯ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಗ್ರಾಮ ಪಂಚಾಯಿತಿ ಮುಂದೆ ಬಾಲಕನ ಶವವಿಟ್ಟು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಸ್ಥಳಕ್ಕೆ ಕೂಡಗಿ ಎನ್​​ಟಿಪಿಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಕಾಲೇಜೇ ಸರಿ ಇಲ್ಲ ಅಂತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!

    ನಾನ್ಯಾರನ್ನೂ ಪ್ರೀತಿಸಿಲ್ಲ, ನನ್ನ ಸಾವಿಗೆ ಪ್ರೀತಿ ಕಾರಣವಲ್ಲ ಎಂದು ಹೇಳಿ 23ನೇ ಮಹಡಿಯಿಂದ ಹಾರಿ ಸತ್ತ ವಿದ್ಯಾರ್ಥಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts