ಉನ್ನಾವ್ : ಕರೊನಾ ಕರ್ಫ್ಯೂ ಜಾರಿಗೊಳಿಸುವ ಭರಾಟೆಯಲ್ಲಿ ಪೊಲೀಸರು 17 ವರ್ಷ ವಯಸ್ಸಿನ ಬಾಲಕನೊಬ್ಬನ ಪ್ರಾಣ ತೆಗೆದಿರುವ ಘಟನೆ ನಡೆದಿದೆ. ಮನೆಯ ಮುಂದೆ ತರಕಾರಿ ಮಾರುತ್ತಿದ್ದ ನತದೃಷ್ಟ ಬಾಲಕನೊಬ್ಬ ಪೊಲೀಸರ ಲಾಠಿ ಏಟು ತಿಂದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಿಂದ ವರದಿಯಾಗಿದೆ.
ಉನ್ನಾವ್ ಜಿಲ್ಲೆಯ ಬಂಗಾರ್ಮಾವ್ ಪ್ರದೇಶದ ಭಟ್ಪುರಿ ಬಡಾವಣೆಯಲ್ಲಿ ಬಾಲಕನೊಬ್ಬ ಮನೆಯ ಹೊರಗೆ ತರಕಾರಿ ಮಾರುತ್ತಿದ್ದ. ಕರೊನಾ ಕರ್ಫ್ಯೂ ಉಲ್ಲಂಘಿಸಿದ್ದಕ್ಕಾಗಿ ಅವನನ್ನು ಹಿಡಿದ ಪೊಲೀಸ್ ಪೇದೆ ಲಾಠಿಯಿಂದ ಹೊಡೆದರು. ನಂತರ ಪೊಲೀಸ್ ಠಾಣೆಗೆ ಕರೆದೊಯ್ದು ಅಲ್ಲೂ ಥಳಿಸಿದರು. ಬಾಲಕನ ಪರಿಸ್ಥಿತಿ ಬಿಗಡಾಯಿಸಿತೆಂದು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಾಗ ಬಾಲಕ ಮೃತಪಟ್ಟಿದ್ದ ಎನ್ನಲಾಗಿದೆ.
ಇದನ್ನೂ ಓದಿ: ದಿ ಫ್ಯಾಮಿಲಿ ಮ್ಯಾನ್ ವಿರುದ್ಧ ಎನ್ಟಿಕೆ ಆಕ್ರೋಶ … ಇಲ್ಲಿದೆ ಕಾರಣ
ಪೊಲೀಸರ ಈ ವರ್ತನೆಯಿಂದ ಸಿಟ್ಟುಗೊಂಡಿರುವ ಸ್ಥಳೀಯರು ಲಖನೌ ರೋಡ್ ಕ್ರಾಸಿಂಗ್ನಲ್ಲಿ ವಾಹನಗಳನ್ನು ಅಡ್ಡಗಟ್ಟಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಪ್ರತಿಭಟನೆ ನಡೆಸಿದರು ಎನ್ನಲಾಗಿದೆ. ನಂತರ “ಘಟನೆಗೆ ಕಾರಣರಾದ ಪೇದೆ ವಿಜಯ್ ಚೌಧರಿಯನ್ನು ತಕ್ಷಣವೇ ಸಸ್ಪೆಂಡ್ ಮಾಡಿದ್ದು, ಹೋಮ್ಗಾರ್ಡ್ ಸತ್ಯಪ್ರಕಾಶ್ರನ್ನು ಕೆಲಸದಿಂದ ತೆಗೆಯಲಾಗಿದೆ. ಇಡೀ ಪ್ರಕರಣದ ತನಿಖೆ ನಡೆಯಲಿದ್ದು, ಪೊಲೀಸರ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ” ಎಂದು ಪೊಲೀಸ್ ಇಲಾಖೆ ಹೇಳಿಕೆ ನೀಡಿದೆ. (ಏಜೆನ್ಸೀಸ್)
ಡಿಎಲ್ಎಫ್ ಲಂಚ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ಗೆ ಕ್ಲೀನ್ ಚಿಟ್
VIDEO | ಆ್ಯಂಜಲೀನಾ ಜೋಲಿ ‘ಜೇನುಹುಳಗಳ ದಿನ’ ಆಚರಿಸಿದ್ದು ಹೀಗೆ !
ಭವಾನಿಪುರದಿಂದ ಮತ್ತೆ ಸ್ಪರ್ಧಿಸಲಿದ್ದಾರೆ ಮಮತಾ ಬ್ಯಾನರ್ಜಿ