More

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಸರ್ಕಾರಕ್ಕೆ ವಂಚನೆ

    ಬಾಳೆಹೊನ್ನೂರು: ಎನ್.ಆರ್.ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಬಿಪಿಎಲ್ ಕಾರ್ಡ್ ಪಡೆಯುವ ಮೂಲಕ ಸರ್ಕಾರಕ್ಕೆ ವಂಚಿಸಿದ್ದಾರೆ ಎಂದು ಬಾಳೆಹೊನ್ನೂರು ಹೋಬಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕಿಚ್ಚಬ್ಬಿ ಆರೋಪಿಸಿದ್ದಾರೆ.

    ಆಡುವಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅವರು ತಮ್ಮ ತಾಯಿ ಅವರೊಂದಿಗೆ ಜಂಟಿ ಖಾತೆಯಲ್ಲಿ 11ಎಕರೆ 38 ಗುಂಟೆ ಜಮೀನು ಹೊಂದಿದ್ದರೂ ತಾಯಿ ಹೆಸರಲ್ಲಿ ಎಪಿಎಲ್ ಹಾಗೂ ಪತ್ನಿ ಹೆಸರಲ್ಲಿ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

    ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅಧ್ಯಕ್ಷರು ಒಂದೇ ಕುಟುಂಬಕ್ಕೆ ಎರಡು ಪಡಿತರ ಚೀಟಿ ಮಾಡಿಸಿಕೊಂಡು ಸರ್ಕಾರಕ್ಕೆ ವಂಚಿಸಿದ್ದಾರೆ. ಆರ್ಥಿಕವಾಗಿ ಸದೃಢರಾಗಿದ್ದರೂ ಗ್ರಾಪಂನಲ್ಲಿ ಶೌಚಗೃಹ ನಿರ್ವಣಕ್ಕಾಗಿ ತಾಯಿ ಹೆಸರಲ್ಲಿ 25 ಸಾವಿರ ರೂ. ಬಿಲ್ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

    ಈ ಬಗ್ಗೆ ಜಿಪಂ ಸಿಇಒ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಓರ್ವ ಜವಾಬ್ದಾರಿಯುತ ಪ್ರಜೆಯಾಗಿ ಈ ರೀತಿ ಅಕ್ರಮ ಎಸಗಿರುವುದರಿಂದ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸೌಲಭ್ಯಗಳನ್ನು ಸರ್ಕಾರಕ್ಕೆ ವಾಪಸ್ ನೀಡಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts