ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆ,  ಬ್ರಾಹ್ಮಣ ಮಹಾಸಭಾ ಖಂಡನೆ

blank
blank

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಧರಿಸಿದ್ದ ಪವಿತ್ರ ಯಜ್ಞೋಪವಿತ ಜನಿವಾರ ತೆಗೆಯುವಂತೆ ಒತ್ತಾಯ ಮಾಡಿದ್ದು, ಕೆಲ ವಿದ್ಯಾರ್ಥಿಗಳ ಕೈಗೆ ಧರಿಸಿದ ಪವಿತ್ರ ಕಾಶಿದಾರ ಸಹ ತೆಗೆಯಲು ಹೇಳಿರುವುದು ಖಂಡನಾರ್ಹ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಲಕ್ಷ್ಮಣ ಕುಲಕರ್ಣಿ ಹೇಳಿದ್ದಾರೆ.

ವಿದ್ಯಾರ್ಥಿಗಳು ಜನಿವಾರ ತೆಗೆಯದೆ ಇದ್ದಾಗ ಅದನ್ನು ಕತ್ತರಿಸಿದ್ದು ಸನಾತನ ಹಿಂದೂ ಧರ್ಮದ ಭಾಗವಾದ ಬ್ರಾಹ್ಮಣ ಸಮಾಜಕ್ಕೆ ಮಾಡಿದ ಅವಮಾನ, ಉದ್ದೇಶಪೂರ್ವಕವಾಗಿ ಮಾಡಲಾದ ಈ ಕೃತ್ಯವನ್ನು ಸನಾತನ ಹಿಂದೂ ಧರ್ಮ ಮತ್ತು ಬ್ರಾಹ್ಮಣ ಸಮಾಜ ಬಲವಾಗಿ ಖಂಡಿಸುತ್ತದೆ.

ಪದೇಪದೆ ಬ್ರಾಹ್ಮಣ ಸಮಾಜದ ಮೇಲೆ ಮತ್ತು ಸನಾತನ ಹಿಂದೂ ಧರ್ಮದ ಆಚರಣೆ ಪದ್ಧತಿ ನಿಯಮ ಸಂಸ್ಕಾರದ ಮೇಲೆ ಆಗುತ್ತಿರುವ ಗಧಾ ಪ್ರಹಾರವನ್ನು ಸಮಾಜ ಸಹಿಸುವುದಿಲ್ಲ. ಈ ಕುರಿತು ರಾಜ್ಯ ಸರ್ಕಾರ ಸೂಕ್ತ ತನಿಖೆಯನ್ನು ನಡೆಸಿ ತಪ್ಪಿತಸ್ತರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕುಲಕರ್ಣಿ ಅಗ್ರಹಿಸಿದ್ದಾರೆ.

Share This Article

ವಿದುರ ನೀತಿ: ಇಂತಹ ಜನರಿಂದ ದೂರ ಇರಿ.. ಇಲ್ಲವಾದ್ರೆ ಅಪಾಯಕ್ಕೆ ಸಿಲುಕುತ್ತೀರಿ! | Vidura Niti

Vidura Niti: ಮಹಾಭಾರತದಲ್ಲಿ ಪ್ರಮುಖರಲ್ಲಿ ವಿದುರ ಕೂಡ ಒಬ್ಬರು. ಬರೀ ಕೌರವ ಮತ್ತು ಪಾಂಡವರಿಗೆ ಮಾತ್ರ…

ಹುರಿದ ಜೋಳ ಅಥವಾ ಬೇಯಿಸಿದ ಜೋಳ ಇವೆರಡರಲ್ಲಿ ಆರೋಗ್ಯಕ್ಕೆ ಯಾವುದು ಬೆಸ್ಟ್​? ಇಲ್ಲಿದೆ ಮಾಹಿತಿ.. | Corn,

Corn: ಸಾಮಾನ್ಯವಾಗಿ ರಸ್ತೆಗಳ ಬದಿಯಲ್ಲಿ ಹುರಿದ ಜೋಳ ಮಾರಾಟ ಮಾಡುವುದನ್ನು ಅಧಿಕ ಗಮನಿಸಿರುತ್ತೀರಾ ಅಲ್ವಾ.. ಹಾಗೇ…