ಭಾರೀ ಮಳೆಗೆ ಕುಸಿದ ಸೇತುವೆ : ಬೆಂಗಳೂರು-ಮೈಸೂರು ರಸ್ತೆಯಲ್ಲಿ ಟ್ರಾಫಿಕ್​ ಜಾಮ್​, ವಾಹನ ಸವಾರರ ಪರದಾಟ

ಮಂಡ್ಯ: ರಾಜ್ಯದ ಹಲವೆಡೆ ಎಡಬಿಡದೇ ಸುರಿಯುತ್ತಿರುವ ಮಳೆಗೆ ಭಾರೀ ಅನಾಹುತವೇ ಸೃಷ್ಟಿಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸಂಕಷ್ಟ ಎದುರಾಗಿದೆ. ಇನ್ನು ಸಕ್ಕರೆ ನಾಡು ಮಂಡ್ಯದಲ್ಲಿ ಸೇತುವೆಯೇ ಕುಸಿದಿದೆ. ನಿನ್ನೆಯಿಂದ ಸುರಿಯುತ್ತಿರುವ ಮಳೆಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಅಡ್ಡಲಾಗಿ ನಿರ್ಮಿಸಿದ್ದ ಮಂಡ್ಯದ ಇಂಡುವಾಳು ಬಳಿ ಸೇತುವೆ ಕೊಚ್ಚಿಹೋಗಿದೆ. ಹಳ್ಳದಲ್ಲಿ ನೀರು ಹೆಚ್ಚಾದ ಕಾರಣದಿಂದ ಸೇತುವೆ ಕೊಚ್ಚಿಹೋಗಿದ್ದು, ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿರುವ ವಾಹನ ಸವಾರರು ಹೈರಾಣಾಗಿದ್ದಾರೆ. ಟ್ರಾಫಿಕ್ ಕ್ಲಿಯರ್ ಮಾಡಲು … Continue reading ಭಾರೀ ಮಳೆಗೆ ಕುಸಿದ ಸೇತುವೆ : ಬೆಂಗಳೂರು-ಮೈಸೂರು ರಸ್ತೆಯಲ್ಲಿ ಟ್ರಾಫಿಕ್​ ಜಾಮ್​, ವಾಹನ ಸವಾರರ ಪರದಾಟ