More

    ಮನೆಯಲ್ಲಿ ಸಿಲಿಂಡರ್ ಸ್ಫೋಟ: ಸಹೋದರರಿಬ್ಬರ ಸಾವು, ಇನ್ನು ಮೂವರ ಸ್ಥಿತಿ ಚಿಂತಾಜನಕ..

    ಹಾವೇರಿ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸಹೋದರರಿಬ್ಬರು ಸಾವಿಗೀಡಾಗಿದ್ದು, ಇನ್ನು ಮೂವರ ಪರಿಸ್ಥಿತಿ ಚಿಂತಾಜನಕವಾಗಿದೆ. ಹಾವೇರಿ ಜಿಲ್ಲೆಯ ಹಿರೆಕೇರೂರು ತಾಲೂಕಿನ ಕಚವಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.

    ಇಲ್ಲಿನ ಮನೆಯೊಂದರಲ್ಲಿ 15 ದಿನಗಳ ಹಿಂದೆ ಗ್ಯಾಸ್​ ಸಿಲಿಂಡರ್​ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಐವರನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಇದನ್ನೂ ಓದಿ: ಅಮ್ಮನೊಂದಿಗೆ ಜಗಳವಾಡಿ ಮನೆ ಬಿಟ್ಟು ಹೋಗಿದ್ದವ ಬಾವಿಯಲ್ಲಿ ಶವವಾಗಿ ಪತ್ತೆ!

    ಹದಿನೈದು ದಿನಗಳ ಜೀವನ್ಮರಣ ಹೋರಾಟದ ಬಳಿಕ ಇಂದು ಸಹೋದರರಿಬ್ಬರು ಸಾವಿಗೀಡಾಗಿದ್ದಾರೆ. ಚಿದಂಬರ (55) ಹಾಗೂ ಸೀತಾರಾಮ್ (60) ಸಾವಿಗೀಡಾದವರು. ಚಿಂತಾಜನಕ ಪರಿಸ್ಥಿತಿಯಲ್ಲಿರುವ ಇನ್ನು ಮೂವರಿಗೆ ಚಿಕಿತ್ಸೆ ಮುಂದುವರಿದಿದೆ.

    ವಿದ್ಯುತ್​ ಇಲ್ಲದ ಸಂದರ್ಭದಲ್ಲಿ ಮನೆಯಲ್ಲಿ ಮೇಣದಬತ್ತಿ ಹಚ್ಚಿಟ್ಟಿದ್ದರು. ಇದೇ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಗೊಂಡು ದುರಂತ ಸಂಭವಿಸಿತ್ತು. ಹಿರೆಕೇರೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅದರಲ್ಲಿ ಪೊಲೀಸರ ತಪ್ಪಿಲ್ಲ, ಇದರಲ್ಲಿ ತಪ್ಪಿತ್ತು..: ಸಂಚಾರ ಪೊಲೀಸರ ವಿರುದ್ಧದ ಟೀಕೆಗಳಿಗೆ ರವಿಕಾಂತೇಗೌಡ ಲಿಖಿತ ಉತ್ತರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts