ಚಿತ್ರದುರ್ಗ: ಬೆಂಗಳೂರಿನ ರಾಜ್ಯ ಜ್ಞಾನ ವಿಜ್ಞಾನ ಸಮಿತಿಯಿಂದ ಈಚೆಗೆ ನಡೆದ ಜಿಲ್ಲಾಮಟ್ಟದ ರಸಪ್ರಶ್ನೆಯಲ್ಲಿ ಜಿಲ್ಲೆಯ ಸಂತ ಜೋಸೆಫರ ಕಾನ್ವೆಂಟ್ ಶಾಲೆಯ ನಾಗಶುಭ ಪ್ರಥಮ, ಬೃಹನ್ಮಠ ಪ್ರೌಢಶಾಲೆಯ ಸಂಜನಾ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಎಂದು ಸಮಿತಿ ಜಿಲ್ಲಾ ಸಂಚಾಲಕ ಡಾ.ಕೆ.ಎನ್.ಮಹೇಶ್ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಮಿತಿ ಅಧ್ಯಕ್ಷ ಡಾ.ಎಚ್.ಎಸ್.ಕೆ. ಸ್ವಾಮಿ, ಕಾರ್ಯದರ್ಶಿ ಮಹಾಂತೇಶ್ ಹರ್ಷ ವ್ಯಕ್ತಪಡಿಸಿದ್ದಾರೆ.