More

    ನಗರದ ಪ್ರಮುಖ ರಸ್ತೆಗಳ ಗುಂಡಿ ಮುಚ್ಚಿಸಲು ಬಿಎಸ್‌ಪಿ ಒತ್ತಾಯ

    ಚಿಕ್ಕಮಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಿಸಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಬಹುಜನ ಸಮಾಜ ಪಕ್ಷದ ಮುಖಂಡರುಗಳು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

    ಈ ವೇಳೆ ಮಾತನಾಡಿದ ಬಿಎಸ್‌ಪಿ ತಾಲೂಕು ಅಧ್ಯಕ್ಷ ಎಚ್.ಕುಮಾರ್, ನಗರದ ಎಂ.ಜಿ.ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಹಾಗೂ ಹಿರೇಮಗಳೂರು ಬೈಪಾಸ್ ಸಂಪರ್ಕ ಕಲ್ಪಿಸುವ ದೀಪ ನರ್ಸಿಂಗ್ ಹೋಂ ಎದುರಿನ ರಸ್ತೆಗಳಲ್ಲಿ ತೀವ್ರ ಗುಂಡಿಗಳಾಗಿದ್ದು, ಅಪಘಾತಗಳು ಸಾಮಾನ್ಯ ಎನ್ನುವಂತಾಗಿದೆ. ಹೀಗಾಗಿ ಕೂಡಲೇ ಗುಂಡಿಗಳನ್ನು ಮುಚ್ಚಿಸಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    ಪ್ರತಿನಿತ್ಯ ಈ ರಸ್ತೆಗಳಲ್ಲಿ ನೂರಾರು ಸಂಖ್ಯೆಯಲ್ಲಿ ವಾಹನ ಸಂಚರಿಸುತ್ತಿವೆ. ಇಂಥ ರಸ್ತೆಗಳನ್ನು ಅಚ್ಚುಕಟ್ಟಾಗಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ದುರಸ್ಥಿಗೊಳಿಸುವುದು ನಗರಸಭೆ ಕರ್ತವ್ಯ. ಹೀಗಾಗಿ ಸವಾರರಿಗೆ ಹಾಗೂ ಪಾದಚಾರಿಗಳ ರಕ್ಷಣೆಯ ದೃಷ್ಟಿಯಿಂದ ರಸ್ತೆಗಳ ಗುಂಡಿ ಮುಚ್ಚಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
    ಪ್ರಮುಖ ರಸ್ತೆಗಳಲ್ಲಿ ಅತಿಹೆಚ್ಚು ವಾಹನ ದಟ್ಟಣೆಯಿಂದ ದ್ವಿಚಕ್ರ ವಾಹನಗಳು ಗುಂಡಿ ತಪ್ಪಿಸಲು ಹೋಗಿ ಪಾದಚಾರಿಗಳಿಗೆ ಅಥವಾ ಬೇರೆ ವಾಹನಗಳಿಗೆ ಡಿಕ್ಕಿ ಹೊಡೆಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಗುಂಡಿ ಮುಚ್ಚಿಸಲು ಲಕ್ಷಗಟ್ಟಲೇ ಹಣವ್ಯಯಿಸುವ ಅಗತ್ಯತೆ ಇಲ್ಲದಿರುವ ಕಾರಣ ಕಡಿಮೆ ಖರ್ಚಿನಲ್ಲಿ ಗುಂಡಿಗಳನ್ನು ಮುಚ್ಚಿಸಬೇಕು ಎಂದು ಹೇಳಿದರು.
    ನಗರಸಭೆ ಕಾಲಾಹರಣ ಮಾಡುವ ಬದಲು ಎಚ್ಚೆತ್ತುಕೊಂಡು ನಗರದ ಪ್ರಮುಖ ರಸ್ತೆಗಳ ಗುಂಡಿಗಳನ್ನು ಮುಚ್ಚಿಸಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿ ಕೊಡಬೇಕು ಎಂದು ಒತ್ತಾಯಿಸಿದರು.
    ಮನವಿ ಸಲ್ಲಿಸುವ ಸಂದರ್ಭದಲ್ಲಿ ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ, ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ಉಪಾಧ್ಯಕ್ಷರಾದ ಸಿದ್ದಯ್ಯ, ಹೊನ್ನಪ್ಪ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಯೋಜಕ ಗಂಗಾಧರ್, ಪ್ರಧಾನ ಕಾರ್ಯದರ್ಶಿ ಆರ್.ವಸಂತ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts