ಲಖನೌ: ಮುಂಬರುವ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಸಾದುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ ಜತೆ ಬಿಎಸ್ಪಿ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುದ್ದಿಯನ್ನು ಮಾಯಾವತಿ ತಳ್ಳಿಹಾಕಿದರು.
ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಶಿರೋಮಣಿ ಅಕಾಲಿ ದಳದ ಜತೆ ಮಾತ್ರ ಮೈತ್ರಿ ಮಾಡಿಕೊಳ್ಳುವುದಾಗಿ ಮಾಯಾವತಿ ಹೇಳಿದರು. ಇದನ್ನು ಹೊರತುಪಡಿಸಿದರೆ, ಇನ್ನು ಯಾವುದೇ ಪಕ್ಷದ ಜತೆ ಮೈತ್ರಿ ಇಲ್ಲ. 117 ವಿಧಾನಸಭಾ ಸ್ಥಾನಗಳಿರುವ ಪಂಜಾಬ್ನಲ್ಲಿ ಈಗಾಗಲೇ ಸೀಟು ಹಂಚಿಕೆಯು ನಿರ್ಧಾರವಾಗಿದೆ. ಶಿರೋಮಣಿ ಅಕಾಲಿದಳ 97 ಮತ್ತು ಬಿಎಸ್ಪಿ 20 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿಸಿದರು.
ಎಐಎಂಐಎಂ ಮತ್ತು ಬಿಎಸ್ಪಿ ಮುಂಬರುವ ಉತ್ತರ ಪ್ರದೇಶದ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುದ್ದಿ ನಿನ್ನೆಯಿಂದಲೂ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ಸುದ್ದಿ ಸತ್ಯಕ್ಕೆ ದೂರವಾದದ್ದು ಮತ್ತು ಆಧಾರರಹಿವಾದದ್ದು ಎಂದು ಬಿಎಸ್ಪಿ ತಳ್ಳಿಹಾಕಿದೆ.
ಈಗಾಗಲೇ ಟ್ವೀಟ್ ಮೂಲಕವು ಮಾಯಾವತಿ ಅವರು ಸ್ಪಷ್ಟನೆ ನೀಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್ ಹೊರತುಪಡಿಸಿದರೆ, ಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಗಳಲ್ಲಿ ಯಾವುದೇ ಪಕ್ಷದೊಂದಿಗೆ ಬಿಎಸ್ಪಿ ಮೈತ್ರಿ ಮಾಡಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. (ಏಜೆನ್ಸೀಸ್)
ಮಕ್ಕಳನ್ನು ಬಿಟ್ಟು ಭಾವನೊಂದಿಗೆ ಪರಾರಿಯಾದ ಮಹಿಳೆಗೆ ಮಾರ್ಗ ಮಧ್ಯೆಯೇ ಕಾದಿತ್ತು ಬಿಗ್ ಶಾಕ್..!
#BBK8: ಪ್ರಶಾಂತ್ ಸಂಬರಗಿ ವಿರುದ್ಧ ಗಂಭೀರ ಆರೋಪ ಮಾಡಿದ ದಿವ್ಯಾ ಸುರೇಶ್..!
ಸವಾಲಿಗೆ ಸೋಲದ ಸೇನಾನಿಗಳು: ಸಂಕಷ್ಟದ ಹೊತ್ತಿನಲ್ಲಿ ವೃತ್ತಿ ಧರ್ಮ ಮೆರೆದ ವೈದ್ಯರು..