More

    ನುಗ್ಗಿಕೇರಿ ಆಂಜನೇಯನ ದರ್ಶನ ಪಡೆದ ಬಿಎಸ್‌ವೈ

    ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹನುಮ ಜಯಂತಿ ಅಂಗವಾಗಿ ಗುರುವಾರ ನಗರದ ಐತಿಹಾಸಿಕ ನುಗ್ಗಿಕೇರಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಹನುಮಂತ ದೇವರ ದರ್ಶನ ಪಡೆದ ಅವರು ವಿಶೇಷ ಪೂಜೆ ಸಲ್ಲಿಸಿದರು.

    ಈ ವೇಳೆ ಮಾತನಾಡಿದ ಬಿಎಸ್‌ವೈ, ಹನುಮ ಜಯಂತಿಯಂದು ನುಗ್ಗಿಕೇರಿ ಹನುಮಂತ ದರ್ಶನದ ಸೌಭಾಗ್ಯ ಲಭಿಸಿದೆ. ಶಿಕಾರಿಪುರದ ಹುಚ್ಚರಾಯ ಸ್ವಾಮಿ ಜಾತ್ರೆ ಇದ್ದು, ನಾನು ಅಲ್ಲಿ ಇರಬೇಕಿತ್ತು. ಹುಚ್ಚರಾಯನ ದರ್ಶನದ ಬದಲಿಗೆ ಇಲ್ಲಿ ಆಂಜನೇಯನ ದರ್ಶನ ಪಡೆಯುವ ಭಾಗ್ಯ ಲಭಿಸಿದ್ದು, ಜೀವನ ಸಾರ್ಥಕವಾಯಿತು. ರಾಜ್ಯದಲ್ಲಿ ಸುಭಿಕ್ಷೆ ಇದ್ದು, ಎಲ್ಲರಿಗೂ ಒಳ್ಳೆಯದಾಗಲಿ. ದೇವರ ಆಶೀರ್ವಾದದಿಂದ ಎಲ್ಲರೂ ನೆಮ್ಮದಿಯಿಂದ ಬದುಕುವ ಭಾಗ್ಯ ಸಿಗಲಿ ಎಂದರು.

    ಇದನ್ನೂ ಓದಿ: ಸೊಂಟದ ಸುತ್ತ ಹಣ ಕಟ್ಟಿಕೊಂಡು ಸಾಗಾಟ; 7.5ಲಕ್ಷ ರೂ. ವಶಕ್ಕೆ!
    ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತ ಪ್ರಶ್ನೆಗೆ ಇಲ್ಲಿ ಮಾತನಾಡುವುದು ಬೇಡ ಎಂದರು. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ ಹಾಗೂ ಬಿಜೆಪಿ ಮುಖಂಡರಿದ್ದರು.

    ಮೊಬೈಲ್​ ನುಂಗಿದ ಯುವತಿ; ವೈದ್ಯರಿಂದ 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts