More

    ವಿಶ್ವಕರ್ಮ ಸಮಾಜಕ್ಕೆ ಬಿಎಸ್‌ವೈ ಕೊಡುಗೆ ಅಪಾರ

    ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಾವಧಿಯಲ್ಲಿ ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ವಿಶ್ವಕರ್ಮ ನಿಗಮ ಸ್ಥಾಪಿಸಿ ಅನುದಾನ ನೀಡಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಪರಿಶ್ರಮದಿಂದ ಶಿವಮೊಗ್ಗ, ಕಾಗಿನೆಲೆ, ಶಿಕಾರಿಪುರ ಹಾಗೂ ಶಿರಾಳಕೊಪ್ಪದಲ್ಲಿ ಸಮುದಾಯ ಭವನ ನಿರ್ಮಾಣವಾಗಿದೆ ಎಂದು ವಿಶ್ವಕರ್ಮ ಸಮಾಜದ ಮುಖಂಡ ಮಂಜಾಚಾರ್ ಹೇಳಿದರು.

    ರಾಷ್ಟ್ರದ ಸಮಗ್ರತೆ, ಅಖಂಡತೆ ಹಾಗೂ ರಕ್ಷಣೆ ದೃಷ್ಟಿಯಿಂದ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿಸುವ ಮೂಲಕ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಆಚಾರ್ ಮಾತನಾಡಿ, ವಿಶ್ವಕರ್ಮ ಸಮಾಜ ರಾಜಕೀಯ, ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದೆ. ಸಮಾಜದ ಅಭಿವೃದ್ಧಿಗೆ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ರಾಘವೇಂದ್ರ ಅಪಾರ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.
    ಶಿರಾಳಕೊಪ್ಪ ಕಾಳಿಕಾಂಬ ದೇವಸ್ಥಾನ ಸಮಿತಿ ಅಧ್ಯಕ್ಷ ನಾಗರಾಜ್, ಮಹದೇವಾಚಾರ್, ಕೆ.ಜಿ.ಮಂಜಪ್ಪಾಚಾರ್, ಡಾ. ಶ್ರೀನಿವಾಸ್, ಇಂದುಶೇಖರ್, ಲಿಂಗಾಚಾರ್, ಅನಂತಾಚಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts