ಬಡ ಜನರಿಗೆ ಮನೆ ನಿರ್ಮಿಸಿ ಕೊಡಿ

blank

ರಾಯಚೂರು: ನಗರದ ಸಿಯಾತಲಾಬ್ ಬಡಾವಣೆಯಲ್ಲಿ ಸ್ಲಂ ಬೋರ್ಡ್‌ನ ಶಿಥಿಲಾವಸ್ಥೆಯಲ್ಲಿದ್ದ ಮನೆಗಳನ್ನು ತೆರವುಗೊಳಿಸಿದ ಮನೆಗಳನ್ನು ಮರು ನಿರ್ಮಾಣ ಮಾಡಿಕೊಡಬೇಕು ಎಂದು ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕ್ರಾಂತಿಯೋಗಿ ಶ್ರೀ ಬಸವೇಶ್ವರ ಸೇವಾ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಎಂಟು ತಿಂಗಳ ಹಿಂದೆ ಶಿಥಿಲಾವಸ್ಥೆಯಲ್ಲಿದ್ದ ಮನೆಗಳನ್ನು ನಗರಸಭೆಯಿಂದ ತೆರವುಗೊಳಿಸಿ ಹೊಸ ಮನೆ ನಿರ್ಮಾಣ ಮಾಡಿಕೊಡುವುದಾಗಿ ತಿಳಿಸಲಾಗಿತ್ತು. ಆದರೆ ಇದುವರೆಗೂ ಮನೆ ನಿರ್ಮಾಣ ಮಾಡಲಾಗಿಲ್ಲ. ಇದ್ದ ಮನೆಗಳನ್ನು ತೆರವುಗೊಳಿಸಿದ್ದರಿಂದ ಬಡ ಜನರು ಶೆಡ್‌ಗಳಲ್ಲಿ ವಾಸ ಮಾಡುವಂತಾಗಿದ್ದು, ರಾತ್ರಿ ಸಮಯದಲ್ಲಿ ಹಾವು, ಚೇಳುಗಳ ಕಾಟ ಹೆಚ್ಚಾಗಿದೆ. ಜತೆಗೆ ಬೇಸಿಗೆ ಬರುತ್ತಿದ್ದು, ಟಿನ್‌ಶೆಡ್‌ನಲ್ಲಿ ವಾಸ ಮಾಡುವುದು ಸಮಸ್ಯೆಯಾಗಲಿದೆ. ಕಾರಣ ಕೂಡಲೇ ತೆರವುಗೊಳಿಸಲಾಗಿದ್ದ ಸ್ಥಳದಲ್ಲಿಯೇ ಜನರಿಗೆ ಹೊಸದಾಗಿ ಮನೆಗಳನ್ನು ನಿರ್ಮಾಣ ಮಾಡಿಕೊಡುವ ಮೂಲಕ ಬಡ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸಂಘದ ಅಧ್ಯಕ್ಷ ಕೆ.ರಾಜೇಶಕುಮಾರ, ಪದಾಧಿಕಾರಿಗಳಾದ ಜಂಬಣ್ಣ, ರಾಜು, ವೀರೇಶ, ನಿವಾಸಿಗಳಾದ ದುರ್ಗಮ್ಮ, ಸಾವಿತ್ರಮ್ಮ, ಮಲ್ಲಮ್ಮ, ನಾಗಮ್ಮ, ಜಂಬಮ್ಮ, ಹುಲಿಗೆಮ್ಮ, ಕರಿಯಮ್ಮ ಪಾಲ್ಗೊಂಡಿದ್ರು.

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…