ಬಾಗಲಕೋಟೆ: ಅಕ್ರಮ ಕಸಾಯಿಖಾನೆಗಳನ್ನು ನಗರಸಭೆ ಅಧಿಕಾರಿಗಳು ಜೆಸಿಬಿ ಮೂಲಕ ನೆಲಸಮ ಮಾಡಿಸಿದ್ದು, ಈ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಜಿಲ್ಲೆಯ ಇಳಕಲ್ ಪಟ್ಟಣದ ವಿಜಯ ಮಹಾಂತೇಶ್ವರ ಗದ್ದುಗೆ ರಸ್ತೆಯ ಬಲಭಾಗದಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಎರಡು ಕಸಾಯಿಖಾನೆಗಳು ಧ್ವಂಸಗೊಳಿಸಲಾಗಿದೆ.
ಇಲ್ಲಿ ಗೋವುಗಳ ಹತ್ಯೆ ಮಾಡಲಾಗುತ್ತಿದೆ ಎಂದು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು. ಈ ಬೆನ್ನಲ್ಲೇ ದಾಳಿ ನಡೆಸಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದರು.
ರಬ್ಬಾನಿ ಮಹಮದ್ ಯೂಸುಫ್ ಬೇಪಾರಿ,ಇನಾಯತ್ ಮಹಮ್ಮದ್ ಯೂನುಸ್ ಬೇಪಾರಿ,ಜಿಲಾನಿ ಮೊಹಮ್ಮದ ಯೂಸುಫ್ ಬೇಪಾರಿ ಎಂಬುವರನ್ನು ಬಂಧಿಸಲಾಗಿತ್ತು.
ಈ ಬಳಿಕ ಕಸಾಯಿಖಾನೆಗಳನ್ನು ಸಂಪೂರ್ಣ ನೆಲಸಮ ಮಾಡುವಂತೆ ಹಿಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದರು. ಇತ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಗರಸಭೆ ಅಧಿಕಾರಿಗಳು ಕೂಡ ಶುಕ್ರವಾರ ಬೆಳಗ್ಗೆ ಜೆಸಿಬಿ ತಂದು ಕಸಾಯಿಖಾನೆಯನ್ನು ಧ್ವಂಸಗೊಳಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ತಂದೆಯ ಹುಟ್ಟುಹಬ್ಬ: ಕುಟುಂಬದ ಜತೆ ತಿರುಪತಿಗೆ ಭೇಟಿ ನೀಡಿದ ದೀಪಿಕಾ ಪಡುಕೋಣೆ