ರಾಯಚೂರು: ಮೂವತ್ತೊಂದು ಪ್ರಯಾಣಿಕರಿದ್ದ ರಾಜಹಂಸ ಬಸ್ ಪಲ್ಟಿಯಾಗಿದ್ದು, ಚಾಲಕ ಸಾವಿಗೀಡಾಗಿದ್ದಾರೆ. ಮಾತ್ರವಲ್ಲ, 14 ಪ್ರಯಾಣಿಕರು ಗಾಯಗೊಂಡಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಚಿಕ್ಕಹೆಸರೂರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಶ್ರೀನಿವಾಸ್ (51) ಸಾವಿಗೀಡಾಗಿದ್ದಾರೆ. ಬಸ್ನಲ್ಲಿದ್ದ 14 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈ ಬಸ್ ನಿನ್ನೆ ತಡರಾತ್ರಿ ರಾಯಚೂರಿನಿಂದ ಬೆಳಗಾವಿಗೆ ಹೊರಟಿತ್ತು. ಚಿಕ್ಕಹೆಸರೂರು ಬಳಿ ಚಾಲಕ ಶ್ರೀನಿವಾಸ್ಗೆ ಹೃದಯಾಘಾತವಾಗಿತ್ತು. ಪರಿಣಾಮವಾಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದ್ದು, ಪಕ್ಕದ ಹೊಲಕ್ಕೆ ಉರುಳಿತ್ತು. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಬಗ್ಗೆ ನಿರ್ವಾಹಕ ಗೋವಿಂದ್ ಅವರಿಂದ ಹೇಳಿಕೆ ದಾಖಲಿಸಿಕೊಂಡ ಹಟ್ಟಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಗಳು ಅವೆಲ್ಲ ಅರ್ಥವಾಗದಷ್ಟು ಚಿಕ್ಕವಳು: ಕೊಹ್ಲಿ ಆಟಕ್ಕೆ ಸಂಭ್ರಮಿಸಿ ಅನುಷ್ಕಾ ಪ್ರತಿಕ್ರಿಯಿಸಿದ್ದು ಹೀಗೆ..
ರಾಹುಲ್ ಗಾಂಧಿ ಕಾರ್ನರ್ ಮೀಟಿಂಗ್, ರಮ್ಯಾಗೇ ನೋ ಎಂಟ್ರಿ; ಕೋಪಗೊಂಡು ವಾಪಸ್ ಹೋದ ನಟಿ
ಇಪ್ಪತ್ತಕ್ಕೂ ಹೆಚ್ಚು ವರ್ಷಗಳಿಂದ ಪ್ರತಿ ಮಂಗಳವಾರ ಕಾಡುವ ಸಮಸ್ಯೆ: ಗ್ರಾಮಸ್ಥರ ಪರವಾಗಿ ಸಚಿವರಿಗೆ ಮನವಿ