ಬೆಳಗಾವಿ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ವಾಹನ ಸವಾರರು ಎಷ್ಟೇ ಜಾಗರೂಕತೆ ವಹಿಸಿದರೂ ಸಾಲದು ಎಂಬುವುದಕ್ಕೆ ಇದೊಂದು ತಾಜಾ ಉದಾಹರಣೆ. ಮಳೆಯಿಂದಾಗಿ ಮಬ್ಬು ಕವಿದು, ದಾರಿ ಸರಿ ಕಾಣದೆ ಬಸ್ ಪಲ್ಟಿಯಾದ ಪ್ರಕರಣವೊಂದು ನಡೆದಿದೆ.
ಬೆಳಗಾವಿಯ ಬಡಕೊಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ಸಂಭವಿಸಿದೆ. ಬೆಳಗಾವಿಯಿಂದ ಹಿರೇಕೆರೂರಗೆ ಹೋಗುತ್ತಿದ್ದ ಸರ್ಕಾರಿ ಬಸ್ ಅಪಘಾತಕ್ಕೀಡಾಗಿದೆ.
ಬೆಳಗಾವಿ ಜಿಲ್ಲೆಯಾದ್ಯಂತ ಮಳೆ ಅಬ್ಬರಿಸುತ್ತಿದ್ದು, ಭಾರಿ ಮಳೆಯಿಂದಾಗಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಬಸ್ನಲ್ಲಿ 35 ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಆದರೆ ಬಸ್ನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.
ನಿಮ್ಮೂರಿಗೀಗ ಅವರಲ್ಲ, ಇವರೇ ಇನ್ಸ್ಪೆಕ್ಟರ್; 13 ಡಿವೈಎಸ್ಪಿಗಳೂ ಟ್ರಾನ್ಸ್ಫರ್..