ಚಾಮರಾಜನಗರ: ಪ್ರಯಾಣಿಕರಿಂದ ತುಂಬಿದ್ದ ಬಸ್ಸೊಂದು ಬೆಟ್ಟದ ಇಳಿಜಾರಿನಲ್ಲಿ ಅಪಘಾತಕ್ಕೀಡಾದ ಪ್ರಸಂಗವೊಂದು ನಡೆದಿದೆ. ಚಾಮರಾಜನಗರ ಜಿಲ್ಲೆ ಬಿಳಿಗಿರಿರಂಗನ ಬೆಟ್ಟದ ಚೈನ್ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ.
ಇಲ್ಲಿನ ದೇವಸ್ಥಾನದಲ್ಲಿನ ರಥೋತ್ಸವಕ್ಕೆ ಬಂದಿದ್ದ ಭಕ್ತರನ್ನು ವಾಪಸ್ ಕರೆದೊಯ್ಯುತ್ತಿದ್ದ ಸರ್ಕಾರಿ ಬಸ್, ಮಾರ್ಗಮಧ್ಯೆ ಬೆಟ್ಟದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಬಳಿಕ ಮರವೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ.
90 ಮಂದಿ ಪ್ರಯಾಣಿಕರಿದ್ದ ಈ ಬಸ್ ಅದೃಷ್ಟವಶಾತ್ ಅಂಥ ಗಂಭೀರ ಪರಿಣಾಮಕ್ಕೆ ಒಳಗಾಗಿಲ್ಲ. ಅದಾಗ್ಯೂ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಾದ ಪದ್ಮಮ್ಮ, ವೆಂಕಟಲಕ್ಷ್ಮಮ್ಮ ಅವರನ್ನು ಯಳಂದೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೊಂದು ಫೋನ್ ಕರೆಗೆ ಸಿಎಂ ವಾಪಸ್ ಬಂದರು; ಕರೆ ಮಾಡಿದ್ಯಾರು?
ಬಾಲಿವುಡ್ ಮೇಲೆ ಅಣುಬಾಂಬ್!; ನಿರ್ದೇಶಕ ರಾಮ್ಗೋಪಾಲ್ ವರ್ಮಾ ಹೀಗಂದಿದ್ದೇಕೆ?